ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಚಿಕ್ಕಮಗಳೂರ ನಲ್ಲಿ ‘ಕ್ಯಾಂಪ್ ಫೈರ್, ಭರ್ಜರಿ ಮದ್ಯ ಪಾರ್ಟಿ’ ಮಾಡಿದ್ದ ಆರೋಪಿಗಳ ಫೋಟೋ ವೈರಲ್

63

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ವೈರಲ್ ಆಗುತ್ತಿವೆ.

ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವರದಿಯಲ್ಲಿರುವಂತೆ ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏಪ್ರಿಲ್ 2 ರಂದು ಆರೋಪಿಗಳು ರಾತ್ರಿ ಇಡೀ ಪಾರ್ಟಿ ಮಾಡಿದ್ದಾರೆ.

ಮೂಲಗಳ ಪ್ರಕಾರ ಸುಹಾಸ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲೆಂದೇ ಪಾರ್ಟಿ ಮಾಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಕ್ಯಾಂಪ್ ಫೈರ್ ಹಾಕಿ ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ

. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

  ಈ ಪಾರ್ಟಿಯಲ್ಲಿ ರಂಜಿತ್‌ನನ್ನು ಮುಝಮ್ಮಿಲ್‌ಗೆ ನಿಯಾಜ್‌ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಗೆ ಫಾಝಿಲ್‌ ಸಹೋದರ ಆದಿಲ್‌  5 ಲಕ್ಷ ರೂ. ಸುಪಾರಿ ನೀಡಿದ್ದ. ಈ ಹಣದ ಪೈಕಿ 3 ಲಕ್ಷ ರೂ.ಹಣವನ್ನು ಮುಂಗಡವಾಗಿ ಪಾವತಿಸಲಾಗಿತ್ತು. ಈ ಹಣದಲ್ಲೇ ಪಾರ್ಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮಂಗಳೂರಿನ ಮೊಹಮ್ಮದ್ ಮುಝಮ್ಮಿಲ್‌ 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದು ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಮೇಸ್ತ್ರಿ ಕೆಲಸ ಮಾಡುತ್ತಿರುವ ನಿಯಾಜ್ ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ನೆಲೆಸಿದ್ದ. ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟ ಆರೋಪವಿದೆ.

Leave a comment

Leave a Reply

Your email address will not be published. Required fields are marked *

Related Articles

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...