ಆಪರೇಷನ್ ಸಿಂಧೂರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯಿಂದ ದೇಶವನ್ನು ಉದ್ದೇಶಿಸಿ ಭಾಷಣ

38

” ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಎನ್ಎಸ್ಎ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.


ಪಾಕಿಸ್ತಾನ ಏನಾದರೂ ಮಾಡಿದರೆ ಭಾರತದ ಪ್ರತಿಕ್ರಿಯೆ ಹೆಚ್ಚು ವಿನಾಶಕಾರಿ ಮತ್ತು ಬಲವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ

. ನಿನ್ನೆ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ “ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ.

ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ ಒಪ್ಪಿದರೆ ಮಾತ್ರ ಮಾತುಕತೆಗೆ ಸಿದ್ಧರಿದ್ದೇವೆ, ಅದರ ಹೊರತಾಗಿ ಮಾತನಾಡಲು ಬೇರೇನೂ ಇಲ್ಲ.


ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಕಾಶ್ಮೀರದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ” ಎಂದು ಕಡ್ಡಿ ಮುರಿದಂತೆ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...