ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ಶೌಚಾಲಯ ಗೋಡೆ ಮೇಲೆ ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ:: ರಚನ್ ಸಾಲಿಯಾನ್

153

ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾಹಾಸ್ಟಲ್ ಶೌಚಾಲಯ ದ ಗೋಡೆ ಮೇಲೆ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಸಿ ಆರೋಪಿತ ವಿದ್ಯಾರ್ಥಿನಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಸ್ಥಾಪಕಾಧ್ಯಕ್ಷ ಶಿವಕುಮಾರ್ ಕರ್ಜೆ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಕಾರ್ಕಳ :- ಮೇ :12 ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ಹಾಸ್ಟಲ್ ಕ್ಯಾಂಪಸ್ ಶೌಚಾಲಯ ಗೋಡೆಯಲ್ಲಿ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ನಡೆಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಗ್ರಹ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿ ಕೂಂಡಿರುವ ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ನ ಶೌಚಾಲಯ ಗೋಡೆಯ ಮೇಲೆ ದಿನಾಂಕ 07-05-2025 ರಂದು ರಾತ್ರಿ ಕೆಲವು ವಿದ್ಯಾರ್ಥಿನಿಯರು ದೇಶ ದ್ರೋಹ ಬರವಣಿಗೆಯ ಘಟನೆಯಲ್ಲಿ ಕಂಡು ಬಂದಿದ್ದು, ದೇಶದ ಅಂತರಿಕ ಭದ್ರತೆಗೆ ಅನುಮಾನ ಸೃಷ್ಟಿಸುವ ಕೃತ್ಯವಾಗಿದ್ದು , ಇದನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ತ್ರೀವವಾಗಿ ಖಂಡಿಸುತ್ತದೆ.

ಪ್ರಸುತ ಸಂದರ್ಭದಲ್ಲಿ ದೇಶದಲ್ಲಿ ನಡೆಯುತಿರುವ ಸೈನ್ಯ ಹಾಗೂ ಕೇಂದ್ರ ಸರಕಾರದ ರಾಜತಾಂತ್ರಿಕ ನಿರ್ಧಾರಗಳನ್ನು ದೇಶದ ಎಲ್ಲಾ ನಾಗರಿಕರು ಪಕ್ಷಾತೀತವಾಗಿ ಬೆಂಬಲಿಸುತ್ತಿರುವ ಸಂದರ್ಭದಲ್ಲಿ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸುತಿದ್ದು, ನಮ್ಮ ದೇಶದ ಸೈನ್ಯದ ತ್ಯಾಗ ಮತ್ತು ಸೇವೆಯನ್ನು ಇಡೀ ದೇಶವೇ ಕೊಂಡಾಡುತಿರುವುದು ಗಮನಾರ್ಹ ಸಂಗತಿ. ಇಂತಹ ಸಂದರ್ಭದಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಚಟುವಟಿಕೆ ಕಂಡು ಬಂದಿರುವುದು ಅವಮಾನಿಯ.

ಈ ರೀತಿಯ ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ *ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅಂತಹ ವಿದ್ಯಾರ್ಥಿಗಳನ್ನು ಕಾಲೇಜ್ ನಿಂದ ಅಮಾನತು ಗೊಳಿಸಬೇಕೆಂದು

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಉಡುಪಿ ಜಿಲ್ಲಾಧ್ಯಕ್ಷ ಸ್ವಯಂ ಶೆಟ್ಟಿ , ಪಧಾಧಿಕಾರಿಗಳಾದ ಸ್ಮರಣ್ ನಿಟ್ಟೆ ,ಅಭಿಲಾಷ್ ನಿಟ್ಟೆ , ಕಾರ್ಕಳ ತಾಲೂಕು ಅಧ್ಯಕ್ಷ ಪ್ರತೀಕ್ ಶೆಟ್ಟಿ , ಸನ್ನಿ ನೇಲ್ಸನ್ ಡಿಸೋಜ ಉಪಸ್ಥಿತರಿದ್ದರು.*

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...