ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ ಆರು ಜನ ಪಿಎಫ್ ಐ ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ 13,ಲಕ್ಷ ದಂಡ ವಿಧಿಸಿದ ನ್ಯಾಯಾಲಯ

38
2021 ರಲ್ಲಿ ನಡೆದಿದ್ದ ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕ್ರಿಶೂರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿಷೇಧಿತ ಪಾಂಪ್ಯುಲರ್ ಫ್ರಾಂಟ್ ಆಫ್ ಇಂಡಿಯಾದ (PFI) ನ ಆರು ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ ಒಟ್ಟು 13 ಲಕ್ಷ ರೂ. ದಂಡವನ್ನೂ ವಿಧಿಸಿದೆ.


ರಾಜಕೀಯ ಪ್ರೇರಿತ ಕೊಲೆ ಪ್ರಕರಣ ಬಲವಾದ ವಿಧಿವಿಜ್ಞಾನ ಮತ್ತು ಡಿಜಿಟಲ್ ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ‘ನಾಚು’ ಎಂದು ಕರೆಯಲಾಗುತ್ತಿದ್ದ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ಕಾರ್ಯಕರ್ತ ಶಮೀರ್ ನನ್ನು ರಾಜಕೀಯ ದ್ವೇಷದಿಂದ ಅಕ್ಟೋಬರ್ 22, 2021 ರಂದು ಹಾಡಹಗಲಿನಲ್ಲಿಯೇ ಹತ್ಯೆ ಮಾಡಲಾಗಿತ್ತು. ಮನ್ನುತ್ತಿಯಲ್ಲಿ ಆಟೊರಿಕ್ಷಾದಲ್ಲಿ ಬಂದ ಆರೋಪಿಗಳು ಶಮೀರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಸೋಮವಾರ ಶಿಕ್ಷೆಗೆ ಗುರಿಯಾದವರಲ್ಲಿ ಕೊಲೆಯಲ್ಲಿ ನೇರವಾಗಿ ಭಾಗಿಯಾದ ಮೂವರು ಹಾಗೂ ಪಿತೂರಿಯಲ್ಲಿ ಭಾಗಿಯಾದ ಮೂವರು ಇದ್ದಾರೆ. ಆರೋಪಿಗಳ ವಿರುದ್ಧ 68 ಸಾಕ್ಷಿಗಳು, 200 ಕ್ಕೂ ಹೆಚ್ಚು ದಾಖಲೆಗಳು ಮತ್ತು 22 ವಸ್ತುಗಳ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಹಾಜರುಪಡಿಸಿತು.

ಸೈಬರ್ ಫೋರೆನ್ಸಿಕ್ಸ್, ಡಿಎನ್ಎ ವರದಿಗಳು ಮತ್ತು ಇತರ ವೈಜ್ಞಾನಿಕ ಪುರಾವೆಗಳು ಅಪರಾಧವನ್ನು ಸಾಬೀತುಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ.

ಕಳೆದ ತಿಂಗಳು ಪ್ರತ್ಯೇಕ ಪ್ರಕರಣದಲ್ಲಿ 2022 ರಲ್ಲಿ ಪಾಲಕ್ಕಾಡ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಶ್ರೀನಿವಾಸನ್ ಹತ್ಯೆಯ ಪ್ರಮುಖ ಆರೋಪಿ ಶಮ್ಲಾದ್ ನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿತ್ತು.

ಆರೋಪ ಮಲಪ್ಪುರಂನ ಮಂಜೇರಿಯ PFI ಸದಸ್ಯ ಶಮ್ನಾದ್ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆತನ ತಲೆಗೆ 7 ಲಕ್ಷ ರೂ. ಬಹುಮಾನ ಕೂಡಾ ಘೋಷಿಸಿತ್ತು. ಎನ್‌ಐಎ ಸತತ ಪ್ರಯತ್ನದ ಬಳಿಕ ಕೊನೆಗೂ ಎರ್ನಾಕುಲಂನಲ್ಲಿ ಸಿಕ್ಕಿಬಿದ್ದಿದ್ದಾನೆ.

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...