ಸರಕಾರದ ನೇತೃತ್ವದಲ್ಲಿ 108 ಆಂಬುಲೆನ್ಸ್ ಸೇವೆ ನಿರ್ವಹಣೆ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

41

“ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ ಇನ್ನು ಮುಂದೆ 108 ಆ್ಯಂಬುಲೆನ್ಸ್ ಸೇವೆ ಒದಗಿಸುತ್ತದೆ

. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವ ವಿಚಾರ ಏಜೆನ್ಸಿ ಮೂಲಕ ನಡೆಯುತ್ತದೆ.

ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದರು. ನಾವು ಯಾವುದೇ ವೇತನ ತಡೆ ಹಿಡಿದಿಲ್ಲ 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚಿತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ

. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನೆಲೆ ತಡವಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡಿದಿಲ್ಲ ಎಂದರು.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಯಾರಿಗೂ ಶಿಫಾರಸು ಮಾಡಿಲ್ಲ ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಆಯ್ಕೆ ವಿಚಾರವಾಗಿ, ನಾನು ಯಾರಿಗೂ ಶಿಫಾರಸು ಮಾಡಿಲ್ಲ. ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ ಮಾಡಿರುವುದು. ಇದು ಒಳ್ಳೆ ಬೆಳವಣಿಗೆ ಅಲ್ಲ. ಇದರ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜತೆ ಮಾತನಾಡುತ್ತೇನೆ.

ರೂಲ್ಸ್ ಪ್ರಕಾರ ಹರೀಶ ನನ್ನು ಬದಲಾವಣೆ ಮಾಡಲು ಆಗುವುದಿಲ್ಲ. 3 ವರ್ಷ ಅಧಿಕಾರಾವಧಿ ಇರುತ್ತದೆ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು. ನಾಳೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಬಂದ ಮೇಲೆ ಹೊಸ ಕಾಯಕಲ್ಪ ಕೊಟ್ಟಿದೆ

. ಅಧಿವೇಶನದಲ್ಲಿ ಕೂಡ ಚರ್ಚೆ ಆಗಿ ಶಾಸಕರ ಸಮಿತಿ ವರದಿ ಕೊಟ್ಟು, ಸಾರ್ವಜನಿಕರ ಜೊತೆ ಚರ್ಚೆ ಆಗಿ ರಾಜ್ಯ ಲರು ಅನುಮೋದನೆ ಕೊಟ್ಟು ಮಾನ್ಯತೆ ಸಿಕ್ಕಿದೆ. ಬೆಂಗಳೂರು ವಿಶ್ವ ದರ್ಜೆ ನಗರ. ಆಡಳಿತ ವ್ಯವಸ್ಥೆ ಸುಧಾರಣೆ ಮಾಡುವ ಅವಶ್ಯಕತೆ ಇದೆ ಎಂದರು.


Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...