ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಇಂಡಿಯಾ ಒಕ್ಕೂಟ ಒಡೆದ ಮನೆಯಂತಾಗಿದೆ:: ಪಿ ಚಿದಂಬರಂ

73

“ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಹಳಿತಪ್ಪಿರುವಂತೆ ಕಂಡು ಬರುತ್ತಿದೆ. ಅವುಗಳ ಮಧ್ಯೆ ಒಗ್ಗಟ್ಟಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಅವರು ಕಳವಳ ವ್ಯಕ್ತಪಡಿಸಿದ್ದಾರೆ

. ಸಲ್ಮಾನ್ ಖುರ್ಷಿದ್ ಮತ್ತು ಮೃತ್ಯುಂಜಯ್ ಸಿಂಗ್ ಯಾದವ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಚಿದಂಬರಂ, 2029ರ ಚುನಾವಣೆ ಇಂಡಿಯಾ ಮೈತ್ರಿಕೂಟಕ್ಕೆ ನಿರ್ಣಾಯಕವಾಗಲಿದೆ. ಸದ್ಯದ ಮಟ್ಟಿಗೆ ನಮ್ಮ ಮೈತ್ರಿಕೂಟವು ಒಡೆದಂತೆ ಕಾಣುತ್ತದೆ ಎಂದು ಚಿದಂಬರಂ ಅಭಿಪ್ರಾಯ ಪಟ್ಟಿದ್ದಾರೆ.

ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಹೇಳುವುದಾದರೆ, ನನ್ನ ಅನುಭವದ ಪ್ರಕಾರ ಹೇಳುವುದಾದರೇ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಎಂದು ಹೇಳುವುದರಲ್ಲಿ ನನಗೆ ಯಾವುದೇ ಹಿಂಜರಿಕೆ ಇಲ್ಲ. ಅದೇ, ಇನ್ನೊಂದು ಕಡೆ ನಮ್ಮ ಮೈತ್ರಿಕೂಟ ಒಡೆದ ಮನೆಯಂತಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

ಮೃತ್ಯುಂಜಯ್ ಸಿಂಗ್ ಯಾದವ್ ಹೇಳಿದಂತೆ ಇಂಡಿಯಾ ಒಕ್ಕೂಟದ ಭವಿಷ್ಯವು ಅಷ್ಟೊಂದು ಉಜ್ವಲವಾಗಿಲ್ಲ. ಮೈತ್ರಿಕೂಟದಲ್ಲಿ ಇನ್ನೂ ಒಗ್ಗಟ್ಟು ಇದೆ ಎಂದು ಅವರು ಭಾವಿಸುತ್ತಿರುವಂತೆ ತೋರುತ್ತದೆ.

ಆದರೆ ಆ ಬಗ್ಗೆ ನನಗೆ ಖಚಿತತೆ ಇಲ್ಲ. ಈ ಬಗ್ಗೆ ಸಲ್ಮಾನ್ ಖುರ್ಷಿದ್ ಅವರು ಮಾತ್ರ ಉತ್ತರಿಸಬಹುದು. ಏಕೆಂದರೆ ಸಲ್ಮಾನ್ ಅವರು ಇಂಡಿಯಾ ಒಕ್ಕೂಟದ ಮಾತುಕತೆ ನಡೆಸಿದ ತಂಡದ ಭಾಗವಾಗಿದ್ದರು.

ಚುನಾವಣಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಯವರೆಗೆ ಎಲ್ಲವನ್ನೂ ನಿಯಂತ್ರಿಸುವ ಶಕ್ತಿ ಬಿಜೆಪಿಗಿದೆ, ಇದು ವಾಸ್ತವತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನುಮತಿಸಬಹುದಾದ ಬಲಿಷ್ಠ ಯಂತ್ರವಿದು.

ಸಲ್ಮಾನ್ ಖುರ್ಷಿದ್ ಮತ್ತು ಯಾದವ್ ಅವರ ಪುಸ್ತಕವು, ಕಾಂಗ್ರೆಸ್ ಪಾರ್ಟಿಯ ಪುನಶ್ಚೇತನದ ಬಗ್ಗೆ ಬೆಳಕು ಚೆಲ್ಲುತ್ತದೆ. ನಮ್ಮ ದೇಶದ ಏಕತೆ ಕಾಪಾಡಿಕೊಳ್ಳಲು ವಿರೋಧ ಪಕ್ಷಗಳು ಒಗ್ಗೂಡಿದ್ದವು ಎಂದು ಪುಸ್ತಕದಲ್ಲಿ ವಿವರಿಸಲಾಗಿದೆ ಎಂದು ಪಿ.ಚಿದಂಬರಂ ಹೇಳಿದ್ದಾರೆ

. ಮೈತ್ರಿಕೂಟ ಸಂಪೂರ್ಣವಾಗಿ ಒಗ್ಗಟ್ಟಿನಿಂದ ಇದ್ದರೆ, ನಾನು ತುಂಬಾ ಸಂತೋಷಪಡುತ್ತೇನೆ. ಆದರೆ ಅಲ್ಲಿ ಒಗ್ಗಟ್ಟು ಇಲ್ಲ ಎಂಬುದು ಕ್ಷಣಾರ್ಧದಲ್ಲಿ ತಿಳಿದು ಬರುತ್ತದೆ ಎಂದು ಚಿದಂಬರಂ ಹೇಳಿದರು. ಮೈತ್ರಿಕೂಟವನ್ನು ಒಟ್ಟಿಗೆ ಸೇರಿಸಬಹುದು, ಇನ್ನೂ ಅದಕ್ಕೆ ಸಮಯವಿದೆ.

ಇಂಡಿಯಾ ಒಕ್ಕೂಟವು ಅಸಾಧಾರಣ ವ್ಯವಸ್ಥೆಯೊಂದರ ವಿರುದ್ಧ ಹೋರಾಡುತ್ತಿದೆ. ಅದನ್ನು ಎದುರಿಸಲು ಎಲ್ಲಾ ರಂಗಗಳಲ್ಲಿಯೂ ಹೋರಾಡಬೇಕು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವರೂ ಆದ ಪಿ. ಚಿದಂಬರಂ ಎಚ್ಚರಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...