ನ್ಯಾಯ ಕೇಳಲು ಬಂದ ಯುವಕನ ಮೇಲೆ ತಹಶೀಲ್ದಾರ್ ಕಚೇರಿಯಲ್ಲಿ ಹಲ್ಲೆ ವಿಡಿಯೋ ವೈರಲ್

36

“ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಘಟನೆ ಕುರಿತು ತಪ್ಪಿತಸ್ಥರನ್ನು ಗುರುತಿಸಲು ಅಕ್ಷಯ್ ತಹಶಿಲ್ದಾರ್ ಕಚೇರಿಗೆ ಹೋಗಿದ್ದನು.

ಅಕ್ಷಯ್ ಪ್ರಶ್ನೆಗೆ ಕೆರಳಿದ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಹಾಗೂ ಅವರ ತಂಡ ಅಕ್ಷಯ್ ನನ್ನು ಕಚೇರಿಗೆ ಕರೆಸಿಕೊಂಡು ಹಲ್ಲೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಘಟನೆ ಸುದ್ದಿಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೋರ್ವರು ರಾಜಿ ಸಂಧಾನ ಮಾಡಿದ್ದಾರೆ ಎನ್ನುವುದು ಕೂಡ ಸುದ್ದಿಯಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ತಿಳಿಯಬೇಕಿದೆ.

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...