ಬೆಂಗಳೂರಿನಲ್ಲಿ ಒಬ್ಬ ಆಧುನಿಕ ರಾಬಿನ್ ಹುಡ್ ಮನೆ ಕಳ್ಳತನ ಮಾಡಿ 20 ವಿದ್ಯಾರ್ಥಿಗಳ. 14 ಲಕ್ಷ ಶಾಲಾ ಕಾಲೇಜು ಶುಲ್ಕ ಕಟ್ಟಿದ್ದ ಆರೋಪಿ ಬಂಧನ

3

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ರಾಬಿನ್ ಹುಡ್ ಮಾದರಿಯ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ

. ಹೌದು.. ಕಳ್ಳತನ ಮಾಡಿದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು  ಬಂಧಿಸಿದ್ದಾರೆ

. ಬಂಧಿತರನ್ನು ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್, ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್‌ ಎಂದು ಗುರುತಿಸಲಾಗಿದೆ.

ಈ ಮೂವರ ಪೈಕಿ ಶಿವು ಅಲಿಯಾಸ್ ಶಿವರಪ್ಪನ್ ಈ ಗ್ಯಾಂಗ್ ನ ಮಾಸ್ಟರ್ ಮೈಂಡ್ ಆಗಿದ್ದು, ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ

. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡುತ್ತಿದ್ದ. ಹೀಗೆ ಮಾರಾಟ ಮಾಡಿದ ಹಣವನ್ನು ತಂದು ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟುತ್ತಿದ್ದ ಎನ್ನಲಾಗಿದೆ.

ಸ್ನೇಹಿತರಿಗೂ ನೆರವು ಪೊಲೀಸ್ ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಫೀಸ್ ಕಟ್ಟಿದ್ದಾನೆ.

ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ ...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್...

180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ...