ಬೆಂಗಳೂರು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತರ ಭೇಟಿ ಅಧಿಕಾರಿಗಳ ವಿರುದ್ಧ ಗರಂ ಸ್ವಯಂ ಪ್ರೇರಿತ ದೂರದ ದಾಖಸಿಕೊಂಡ ಲೋಕಾಯುಕ್ತರು

74

ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ, ನ್ಯಾ.ಬಿ.ವೀರಪ್ಪ ಅವರು ಗುರುವಾರ ಭೇಟಿ ನೀಡಿದ್ದು, ಅವ್ಯವಸ್ಥೆಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆದರು.

ಮಳೆಯಿಂದ ಹಾನಿಗೊಳಗಾದ ನಿವಾಸಿಗಳ ಸಂಕಷ್ಟಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅಧಿಕಾರಿಗಳೊಂದಿಗೆ ಸಾರ್ವಜನಿಕ ಸಭೆಯನ್ನು ಕರೆದಿದ್ದು, ಆಸಕ್ತರು ಸಭೆಯಲ್ಲಿ ಭಾಗವಹಿಸಬಹುದಾಗಿದೆ.

ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ನಗರದ ಸಿಲ್ಡ್‌ಬೋರ್ಡ್, ಪಣತ್ತೂರು ರೈಲ್ವೆ ಸೇತುವೆ, ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ನೀರುಗಾಲುವೆಯಲ್ಲಿ ನೀರು ಹರಿಯದೆ ಸ್ಥಗಿತಗೊಂಡಿರುವುದನ್ನು ಕಂಡು ಸ್ಥಳದಲ್ಲಿದ್ದ ಬಿಎಂಆರ್‌ಸಿಎಲ್ ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಎರಡು ಸಂಸ್ಥೆಗಳ ಮುಖ್ಯ ಎಂಜಿನಿಯರ್‌ಗಳನ್ನು ವಿಚಾರಣೆ ನಡೆಸಿದರು

. ಈ ವೇಳೆ ಅವರು ನೀಡಿದ ವಿವರಣೆಯಿಂದಾಗಿ ಸಮಾಧಾನಗೊಳ್ಳದ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಶುಕ್ರವಾರ ಈ ಬಗ್ಗೆ ವಿಕೃತವಾದ ವರದಿಯೊಂದಿಗೆ ಹಾಜರಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದರು

ಇದೇ ವೇಳೆ ಮಳೆ ನೀರು ನಿಲ್ಲದಂತೆ ಕೈಗೊಳ್ಳುವ ರಿಹಾರಗಳ ಕುರಿತು ಮಾಹಿತಿ ನೀಡುವಂತೆಯೂ ತಿಳಿಸಲಾಯಿತು.

ಬಳಿಕ ಪಣತ್ತೂರುಗೆ ತೆರಳಿದ ಲೋಕಾಯುಕ್ತರು, ಉಪ ಲೋಕಾಯುಕ್ತರು ಪಣತ್ತೂರು ಮುಖ್ಯರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯ ಬಳಿ ಜಲಾವೃತವನ್ನು ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಹೆಣ್ಣೂರು ಬಳಿಯ ಸಾಯಿ ಬಡಾವಣೆಗೆ ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯ ನಿವಾಸಿಗಳು ತಮ್ಮ ಅಹವಾಲನ್ನು ಮುಂದಿಟ್ಟರು.

ಈ ವೇಳೆ ಮನೆಗಳಿಗೆ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿರುವುದು ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು. ಜನರು ಸಹ ತಮ್ಮ ಸಂಕಷ್ಟದ ಬಗ್ಗೆ ವಿವರಿಸಿದರು.

3 ದಿನಗಳಿಂದ ವಿದ್ಯುಚ್ಛಕ್ತಿ ಸಂಪರ್ಕ ಕಡಿತಗೊಳಿಸಲಾಗಿದ್ದು, ಪ್ರತಿ ಬಾರಿ ಮಳೆ ಬಂದರೆ ಈ ಸಮಸ್ಯೆ ತಲೆದೋರುತ್ತದೆ. ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಜನರ ಸಮಸ್ಯೆಗಳನ್ನು ಆಲಿಸಿದ ಲೋಕಾಯುಕ್ತ, ಉಪ ಲೋಕಾಯುಕ್ತರು ಶುಕ್ರವಾರ ವಿಚಾರಣೆಗೆ ಹಾಜರಾಗಿ ವಿಸ್ತೃತ ವರದಿ ನೀಡಬೇಕು. ಸಾರ್ವಜನಿಕರು ಸಹ ಹಾಜರಾಗಿ ಅಹವಾಲು ಸಲ್ಲಿಸುವಂತೆ ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...