ಖ್ಯಾತ ಉದ್ಯಮಿ  ಶ್ರೀಮತಿ ಅಮೃತಾ ಹರೀಶ್ ಭಟ್ ರಿಗೆಒಲಿದ 2025 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ  ಅಂತರಾಷ್ಟ್ರೀಯ ಪ್ರಶಸ್ತಿ

37

ಉಡುಪಿ ರಂಗಭೂಮಿಯ ಚಿತ್ರ ನಟ, ನಿರ್ದೇಶಕ, ಬರಹಗಾರ ಹರೀಶ್ ಭಟ್ಟ ನೀನಾಸಂ ಅವರ ಪತ್ನಿ ಅಮೃತಾ ಹರೀಶ್ 2025ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಉದ್ಯಮಿ‌ ಆಗಿರವ ಅಮೃತಾ ಹರೀಶ್ ಅವರ ಸಾಮಾಜಿಕ ಕೈಂಕರ್ಯಗಳಿಗೆ ಈ‌ ಪ್ರಶಸ್ತಿ ಬಂದಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ‌ ಸ್ವೀಕರಿಸಿದರು.

ವಿಲ್‌ಕ್ರಿಯೇಶನ್ಸ ಕಂಪನಿಯ ಸ್ಥಾಪಕಿ ಆಗಿರುವ ಅಮೃತಾ, ಕಂಟೆಂಟ್ ಕ್ರಿಯೇಟರ್, ಬರಹಗಾರ್ತಿ ಕೂಡ ಹೌದು. “ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ” ಕುರಿತು ಪ್ರಮಾಣಿತ ತರಬೇತುದಾರರು.ಇವರು ಕರ್ನಾಟಕ ಮಾಧ್ಯಮ ಕಾರ್ಮಿಕ ಸಂಘದ ಡಿಜಿಟಲ್ ವಿಭಾಗದ ವಿಭಾಗೀಯ ಅಧ್ಯಕ್ಷರಾಗಿದ್ದಾರೆ.

ಅಮೃತಾರ “ಡ್ರಾಮಾಯಣ” ಎಂಬ ಪ್ರಸಿದ್ಧ ಹಾಸ್ಯ ನಾಟಕ ಜನಪ್ರಿಯವಾಗಿದೆ.ಕಿರುಚಿತ್ರಗಳು ಮತ್ತು ಫೀಚರ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ವ್ಯಕ್ತಿಯ ಹಸ್ತಾಕ್ಷರವನ್ನು ಪರಿಗಣಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪರಿಣಿತಿ ಹೊಂದಿದ್ದು, ಸುಮಾರು 2000 ಪ್ರಕರಣವನ್ನು ಪರಿಹರಿಸಿದ್ದಾರೆ. ಪೋಲಿಸರೊಂದಿಗೆ ಕೈಜೋಡಿಸಿ “ಸುರಕ್ಷಾ ಆಪ್” ಜಾಗೃತಾ ಅಭಿಯಾನಗಳಲ್ಲಿ ಭಾಗವಹಿಸಿದ್ದಾರೆ

.ಮಹಿಳಾ ಉದ್ಯಮಿಗಳ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ನಿರ್ವಹಿಸಿದ್ದಾರೆ.ಅನೇಕ ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ.

ಇವರಿಗೆ‌ ಗೋಲ್ಡನ್ ಸ್ಟಾರ್ ವುಮನ್ ಅವಾರ್ಡ್, ಮಹಿಳಾ ರತ್ನ ಪ್ರಶಸ್ತಿಗಳು ಸೇರಿದಂತೆ ಅನೇಕ‌ಪ್ರಶಸ್ತಿ ಪುರಸ್ಕಾರಗಳು ಸಂದಿದೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...