ಖ್ಯಾತ ಉದ್ಯಮಿ  ಶ್ರೀಮತಿ ಅಮೃತಾ ಹರೀಶ್ ಭಟ್ ರಿಗೆಒಲಿದ 2025 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ  ಅಂತರಾಷ್ಟ್ರೀಯ ಪ್ರಶಸ್ತಿ

53

ಉಡುಪಿ ರಂಗಭೂಮಿಯ ಚಿತ್ರ ನಟ, ನಿರ್ದೇಶಕ, ಬರಹಗಾರ ಹರೀಶ್ ಭಟ್ಟ ನೀನಾಸಂ ಅವರ ಪತ್ನಿ ಅಮೃತಾ ಹರೀಶ್ 2025ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಉದ್ಯಮಿ‌ ಆಗಿರವ ಅಮೃತಾ ಹರೀಶ್ ಅವರ ಸಾಮಾಜಿಕ ಕೈಂಕರ್ಯಗಳಿಗೆ ಈ‌ ಪ್ರಶಸ್ತಿ ಬಂದಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ‌ ಸ್ವೀಕರಿಸಿದರು.

ವಿಲ್‌ಕ್ರಿಯೇಶನ್ಸ ಕಂಪನಿಯ ಸ್ಥಾಪಕಿ ಆಗಿರುವ ಅಮೃತಾ, ಕಂಟೆಂಟ್ ಕ್ರಿಯೇಟರ್, ಬರಹಗಾರ್ತಿ ಕೂಡ ಹೌದು. “ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ” ಕುರಿತು ಪ್ರಮಾಣಿತ ತರಬೇತುದಾರರು.ಇವರು ಕರ್ನಾಟಕ ಮಾಧ್ಯಮ ಕಾರ್ಮಿಕ ಸಂಘದ ಡಿಜಿಟಲ್ ವಿಭಾಗದ ವಿಭಾಗೀಯ ಅಧ್ಯಕ್ಷರಾಗಿದ್ದಾರೆ.

ಅಮೃತಾರ “ಡ್ರಾಮಾಯಣ” ಎಂಬ ಪ್ರಸಿದ್ಧ ಹಾಸ್ಯ ನಾಟಕ ಜನಪ್ರಿಯವಾಗಿದೆ.ಕಿರುಚಿತ್ರಗಳು ಮತ್ತು ಫೀಚರ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ವ್ಯಕ್ತಿಯ ಹಸ್ತಾಕ್ಷರವನ್ನು ಪರಿಗಣಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪರಿಣಿತಿ ಹೊಂದಿದ್ದು, ಸುಮಾರು 2000 ಪ್ರಕರಣವನ್ನು ಪರಿಹರಿಸಿದ್ದಾರೆ. ಪೋಲಿಸರೊಂದಿಗೆ ಕೈಜೋಡಿಸಿ “ಸುರಕ್ಷಾ ಆಪ್” ಜಾಗೃತಾ ಅಭಿಯಾನಗಳಲ್ಲಿ ಭಾಗವಹಿಸಿದ್ದಾರೆ

.ಮಹಿಳಾ ಉದ್ಯಮಿಗಳ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ನಿರ್ವಹಿಸಿದ್ದಾರೆ.ಅನೇಕ ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ.

ಇವರಿಗೆ‌ ಗೋಲ್ಡನ್ ಸ್ಟಾರ್ ವುಮನ್ ಅವಾರ್ಡ್, ಮಹಿಳಾ ರತ್ನ ಪ್ರಶಸ್ತಿಗಳು ಸೇರಿದಂತೆ ಅನೇಕ‌ಪ್ರಶಸ್ತಿ ಪುರಸ್ಕಾರಗಳು ಸಂದಿದೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...