ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಬಿಜೆಪಿ 18 ಶಾಸಕರ ಅಮಾನತು ವಾಪಾಸ್ ನಿರ್ಧಾರ

3
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ.


18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.

ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಸಂತೋಷದಿಂದ ಶಾಸಕರ ಅಮಾನತು ಹಿಂಪಡೆದಿದ್ದೇನೆ.

ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...