thekarnatakatoday.com
Karavali Karnataka

ಹಿಂದೂ ಮುಖಂಡ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ನೋಟಿಸ್ ಹಿಂದುತ್ವವನ್ನು ದಮನಿಸುವ ಷಡ್ಯಂತರ ವಿರುದ್ಧ ಕಾರ್ಯಕರ್ತರ ಆಕ್ರೋಶ

” ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ  ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.

ಅರುಣ್ ಪುತ್ತಿಲ ಗಡಿಪಾರು ನೋಟಿಸ್ ವಿವರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ

ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ.

ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ

ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ.

ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ನಲ್ಲಿ ಉಲ್ಲೇಖಿಸಿಲ್ಲ

Related posts

ಉಡುಪಿ -ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜುಗಲ್ ಬಂದಿ ಭಜನಾ ಸ್ಪರ್ಧೆ ಬೆಳ್ತಂಗಡಿಯ ಸುನಾದ ವಿನೋದಿನಿ ಭಜನಾ ತಂಡಕ್ಕೆ ಪ್ರಶಸ್ತಿ

The Karnataka Today

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

The Karnataka Today

ಪ್ರತಿಷ್ಠಿತ ಕಾಪು ಪುರಸಭೆ ಕಾನೂನು ಹೋರಾಟ ಎಸ್ ಡಿಪಿಐ ಗೆ ಮುಖಭಂಗ ಸಂತೋಷ್ ಕುಮಾರ್ ಮೂಡುಬೆಳ್ಳೆ ವಾದ ಮಂಡನೆ ಬಿಜೆಪಿಗೆ ಜಯ

The Karnataka Today

Leave a Comment