ಆರ್‌ಸಿಬಿ ವಿಜಯೋತ್ಸವ  ಕಾಲ್ತುಳಿತಕ್ಕೆ 10 ಮಂದಿ ಬಲಿ 20ಕ್ಕೂ ಅಧಿಕ ಮಂದಿ  ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು

84

“ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ.

ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.

ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 10 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ

. ಬೌರಿಂಗ್ ನಲ್ಲಿ ಆರು,ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರು ಸಾವು:ಈ ಪೈಕಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ ರವಾನಿಸಲಾಗಿದ್ದ ಆರು ಮಂದಿ ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಓರ್ವ ದಂತ ವೈದ್ಯಕೀಯ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ

ಏಕಾಏಕಿ ತಳ್ಳಾಟ, ನೂಕಾಟ:18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ.ಈ ವೇಳೆ ಒಬ್ಬರ ಮೇಲೆ ಮತ್ತೋರ್ವರು ಹತ್ತಲು ಪ್ರಯತ್ನಿಸಿದಾಗ ಕಾಲ್ತುಳಿತ ಉಂಟಾಗಿದೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ: ಆರ್ ಸಿಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12 ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ.

ಈ ವೇಳೆ ಗಂಭೀರವಾಗಿ ಅಸ್ವಸ್ಥರಾಗಿದ್ದ ಮಹಿಳಾ ಅಭಿಮಾನಿಯನ್ನು ಕಾರಿನಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  ಇನ್ನೂ ಗೇಟ್ ನಂಬರ್ 6 ರ ಬಳಿ ಯುವಕನೋರ್ವ ಗೇಟ್ ಹತ್ತಲು ಹೋಗಿ ಕಾಲು ಮುರಿದುಕೊಂಡಿರುವುದಾಗಿ ವರದಿಯಾಗಿದೆ.

ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...