ಕಾಲ್ತುಳಿತದಲ್ಲಿ ಮಡಿದ ತನ್ನ ಅಭಿಮಾನಿಗಳಿಗೆ ತಲಾ  ಹತ್ತು ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

40

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದೆ.

ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ.

ಘಟನೆಯಲ್ಲಿ 11 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್‌ಸಿಬಿ, ‘ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ.

ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಘಟನೆಯಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ’ ಎಂದು ಹೇಳಿದೆ.

ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ‘ಆರ್‌ಸಿಬಿ ಕೇರ್ಸ್’ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ.

ನಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ. ಈ ದುಃಖದ ಸಂದರ್ಭದಲ್ಲಿ ನಾವು ಒಗ್ಗಟ್ಟಿನಿಂದ ಇರುತ್ತೇವೆ ಎಂದು ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ...

ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ...

ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ಟರ್ ಇಂಡಿಯಾ...

ಎಚ್ಎಎಲ್ ನಿರ್ಮಿತ ತೇಜಸ್ ಮಾರ್ಕ್- 1ಎ ಫೈಟರ್ ಜೆಟ್ ಭಾರತೀಯ ಸೇನಾ ಬತ್ತಳಿಕೆಗೆ ಸೇರಲು ಸಿದ್ಧತೆ 

ಬೆಂಗಳೂರು: ಮುಂದಿನ ತಿಂಗಳು ಎಚ್‌ಎಎಲ್ ತಾನು ನಿರ್ಮಿಸಿದ 2 ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ಗಳನ್ನು ಭಾರತೀಯ...