ಕೇದಾರನಾಥ್ ಟೇಕಾಫ್ ವೇಳೆ ತಾಂತ್ರಿಕ ದೋಷ ಹೆದ್ದಾರಿಯಲ್ಲಿ ತುರ್ತುಭೂ ಸ್ಪರ್ಶ ಮಾಡಿದ ಹೆಲಿಕಾಪ್ಟರ್ ಕಾರಿಗೆ ಡಿಕ್ಕಿ

39

“ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನಂತರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದ ಒಂದು ಭಾಗವು ಕೆಳಗೆ ರಸ್ತೆಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ತಗುಲಿದ್ದು, ಕಾರು ಜಖಂಗೊಂಡಿದೆ. ಪೈಲಟ್ ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಜನ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.


ಇತ್ತೀಚಿನ ದಿನಗಳಲ್ಲಿ ಚಾರ್ ಧಾಮ್ ಮಾರ್ಗದಲ್ಲಿ ಹೆಲಿಕಾಪ್ಟರ್ ಅಪಘಾತಗಳು ಹೆಚ್ಚುತ್ತಿದ್ದು, ಕಳೆದ ತಿಂಗಳು ಮೇ 8 ರಂದು ಉತ್ತರಕಾಶಿಯಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಸೇರಿದಂತೆ 6 ಯಾತ್ರಿಕರು ಸಾವನ್ನಪ್ಪಿದ್ದರು.

ಏರೋಟ್ರಾನ್ಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಹೆಲಿಕಾಪ್ಟರ್ ಉತ್ತರಕಾಶಿಯ ಗಂಗಾನಿಯಲ್ಲಿ ಅಪಘಾತಕ್ಕೀಡಾಗಿತ್ತು.

ಕ್ರಿಸ್ಟಲ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥೆಗೆ ಸೇರಿದ ಈ ಹೆಲಿಕಾಪ್ಟರ್(AW 119) ರುದ್ರಪ್ರಯಾಗ ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12.52 ಕ್ಕೆ ಹೊರಟಿತ್ತು.

ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಹೀಗಾಗಿ ರಸ್ತೆಯಲ್ಲಿ ನಿಂತಿದ್ದ ಕಾರಿಗೆ ಹೆಲಿಕಾಪ್ಟರ್ ನ ಬಾಲ ತಗುಲಿದೆ ಎಂದು ಮೂಲವೊಂದು ತಿಳಿಸಿದೆ.

ಕಾರು ಕೂಡ ನಜ್ಜುಗುಜ್ಜಾಗಿದೆ” ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, “ವಿಮಾನದಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a comment

Leave a Reply

Your email address will not be published. Required fields are marked *

Related Articles

ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಆಗಮಿಸಿ ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಬ್ರಿಟಿಷ್ ದಂಪತಿಗಳಿಗೆ ಭಾರತ ಬಿಟ್ಟು ತೆರಳುವಂತೆ ಸೂಚನೆ

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನ್‌ ಪರವಾಗಿ ಸ್ಟಿಕ್ಕರ್‌ಗಳನ್ನು ಅಂಟಿಸಿದ...

ಶಿವಲಿಂಗಕ್ಕೆ ಸೂರ್ಯಾಭಿಷೇಕ: 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ, ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ....

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ 2026- 27 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಮಂಗಳೂರು, ಡಿ. 23: ಕಲಬುರಗಿ ಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿಗೆ ಸ್ನಾತಕೋತ್ತರ ಕೋರ್ಸ್‌ಗಳಿಗೆ...

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ  ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

ಮೈಸೂರು : ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ...