thekarnatakatoday.com
News

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ  ಪ್ರಕರಣ ತನಿಖೆಗೆಮಾಜಿ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಆಯೋಗ

“ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿ ಆರ್’ಸಿಬಿ ಅಭಿಮಾನಿಗಳನ್ನು ಬಲಿ ಪಡೆದ,

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು,

ಇದರಂತೆ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚನೆ ಮಾಡಿದೆ.


ಜೂನ್ 5 ರಂದು ಈ ತನಿಖಾ ಆಯೋಗವನ್ನು ರಚನೆ ಮಾಡಲಾಗಿದ್ದು, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು.


ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ನಂತರ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿತ್ತು, ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಣೆ ಮಾಡಿತ್ತು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ಪ್ರಕರಣವನ್ನು ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವ ಆಯೋಗ ತನಿಖೆ ನಡೆಸುತ್ತಿದೆ.

Related posts

ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ಶೌಚಾಲಯ ಗೋಡೆ ಮೇಲೆ ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ:: ರಚನ್ ಸಾಲಿಯಾನ್

The Karnataka Today

ಲಂಚ ಪಡೆಯದೆ  ಮನೆ ದಾಖಲೆ ನೀಡಿದ್ದಕ್ಕಾಗಿ ಪಂಚಾಯತ್ ಅಭಿವ್ರದ್ದಿ ಅಧಿಕಾರಿ ಮೇಲೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿದ ಗ್ರಾಮ ಪಂಚಾಯತ್ ಸದಸ್ಯೆ

The Karnataka Today

ಮಾವು ಬೆಳೆಗಾರರ ಪ್ರತಿಭಟನೆಗೆ ಬೆದರಿದ ಸರಕಾರ ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್

The Karnataka Today

Leave a Comment