ಮಳೆಯಲ್ಲಿ ಬೀದಿ ಪಾಲಾಗಿದ್ದ ಅಸಹಾಯಕ ವೃದ್ಧರ ರಕ್ಷಣೆ ಕುಟುಂಬಿಕರ ಪತ್ತೆಗಾಗಿ ಮನವಿ ಮಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ

40

*ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ:

ಉಡುಪಿ ಜೂ. 12 ಆದಿಉಡುಪಿಯ ಪಂದುಬೆಟ್ಟುವಿನಲ್ಲಿ ಮಳೆಯಲ್ಲಿ ನೆನೆಯುತ್ತಿದ್ದ ಅಸಹಾಯಕರಾಗಿ ದುಃಖಿಸುತ್ತಿದ್ದ ಬೀದಿಪಾಲಾದ ವೃದ್ದರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ಅಂಬಲಪಾಡಿಯ ಪಂಚಾಯಿತಿ ಸದಸ್ಯೆ ಭಾರತಿ ಭಾಸ್ಕರ್ ಸಹಾಯದಿಂದ ರಕ್ಷಿಸಿ ಉದ್ಯಾವರದ ಕನಸಿನ ಮನೆ ಆಶ್ರಮಕ್ಕೆ ದಾಖಲಿಸಿದ ಘಟನೆ ನಡೆದಿದೆ.

ಸ್ಥಳೀಯರಾಗಿದ್ದ ವೃದ್ಧರು ಶಿವ ಪೂಜಾರಿ (85) ಅವಿವಾಹಿತರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇದೀಗ ವೃದ್ಧಾಪ್ಯದಲ್ಲಿ ಅಸಹಾಯಕರಾಗಿ ಬೀದಿಪಾಲಾಗಿದ್ದಾರೆ.

ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಸರಿಯಾಗಿ ಅನ್ನ ಆಹಾರವಿಲ್ಲದೆ ಸ್ಥಳೀಯ ದೈವಸ್ಥಾನದ ಕಲ್ಲು ಚಪ್ಪಡಿ ಆಡಿಯಲ್ಲಿ ಆಶ್ರಯ ಪಡೆದು ದುಃಖಿತರಾಗಿ ಅತಂತ್ರರಾಗಿದ್ದರು. ಮನೆ ಇಲ್ಲದ ವೃದ್ಧರು ಇತ್ತೀಚಿನ ದಿನಗಳಲ್ಲಿ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದಿನಕಳೆಯುತ್ತಿದ್ದರು.

ಈ ಬಗ್ಗೆ ಪಂಚಾಯತ್ ಸದಸ್ಯೆ ವೃದ್ಧರನ್ನು ರಕ್ಷಿಸುವಂತೆ ಮನವಿ ಮಾಡಿದ್ದರು. ಸ್ಪಂದಿಸುವ ಸಂಬಂಧಿಕರು ಅಥವಾ ಸಂಬಂಧಪಟ್ಟವರು ಉದ್ಯಾವರ ಕನಸಿನ ಮನೆ ಆಶ್ರಮವನ್ನು ಸಂಪರ್ಕಿಸಲು ವಿಶು ಶೆಟ್ಟಿಯವರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...