ಮಳೆಯಲ್ಲಿ ಬೀದಿ ಪಾಲಾಗಿದ್ದ ಅಸಹಾಯಕ ವೃದ್ಧರ ರಕ್ಷಣೆ ಕುಟುಂಬಿಕರ ಪತ್ತೆಗಾಗಿ ಮನವಿ ಮಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ

3

*ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ:

ಉಡುಪಿ ಜೂ. 12 ಆದಿಉಡುಪಿಯ ಪಂದುಬೆಟ್ಟುವಿನಲ್ಲಿ ಮಳೆಯಲ್ಲಿ ನೆನೆಯುತ್ತಿದ್ದ ಅಸಹಾಯಕರಾಗಿ ದುಃಖಿಸುತ್ತಿದ್ದ ಬೀದಿಪಾಲಾದ ವೃದ್ದರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ಅಂಬಲಪಾಡಿಯ ಪಂಚಾಯಿತಿ ಸದಸ್ಯೆ ಭಾರತಿ ಭಾಸ್ಕರ್ ಸಹಾಯದಿಂದ ರಕ್ಷಿಸಿ ಉದ್ಯಾವರದ ಕನಸಿನ ಮನೆ ಆಶ್ರಮಕ್ಕೆ ದಾಖಲಿಸಿದ ಘಟನೆ ನಡೆದಿದೆ.

ಸ್ಥಳೀಯರಾಗಿದ್ದ ವೃದ್ಧರು ಶಿವ ಪೂಜಾರಿ (85) ಅವಿವಾಹಿತರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇದೀಗ ವೃದ್ಧಾಪ್ಯದಲ್ಲಿ ಅಸಹಾಯಕರಾಗಿ ಬೀದಿಪಾಲಾಗಿದ್ದಾರೆ.

ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಸರಿಯಾಗಿ ಅನ್ನ ಆಹಾರವಿಲ್ಲದೆ ಸ್ಥಳೀಯ ದೈವಸ್ಥಾನದ ಕಲ್ಲು ಚಪ್ಪಡಿ ಆಡಿಯಲ್ಲಿ ಆಶ್ರಯ ಪಡೆದು ದುಃಖಿತರಾಗಿ ಅತಂತ್ರರಾಗಿದ್ದರು. ಮನೆ ಇಲ್ಲದ ವೃದ್ಧರು ಇತ್ತೀಚಿನ ದಿನಗಳಲ್ಲಿ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದಿನಕಳೆಯುತ್ತಿದ್ದರು.

ಈ ಬಗ್ಗೆ ಪಂಚಾಯತ್ ಸದಸ್ಯೆ ವೃದ್ಧರನ್ನು ರಕ್ಷಿಸುವಂತೆ ಮನವಿ ಮಾಡಿದ್ದರು. ಸ್ಪಂದಿಸುವ ಸಂಬಂಧಿಕರು ಅಥವಾ ಸಂಬಂಧಪಟ್ಟವರು ಉದ್ಯಾವರ ಕನಸಿನ ಮನೆ ಆಶ್ರಮವನ್ನು ಸಂಪರ್ಕಿಸಲು ವಿಶು ಶೆಟ್ಟಿಯವರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...