ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆದೇಶ

3

“ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ನಿರ್ದೇಶನ ನೀಡಿದ್ದಾರೆ.

ಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ ಬಹುಸಂಖ್ಯಾತ ಈ ಜಿಲ್ಲೆಗೆ ರಾಜ್ಯ ಸರ್ಕಾರವು ಆರ್‌ಎಎಫ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಅರೆಸೈನಿಕ ಪಡೆಗಳನ್ನು ನಿಯೋಜಿಸುತ್ತಿದೆ.

ಬಾಂಗ್ಲಾದೇಶ ಪರ ಪೋಸ್ಟರ್ ಅಭಿಯಾನ ಮತ್ತು ಹನುಮಾನ್ ದೇವಾಲಯದಲ್ಲಿ ಹಸುವಿನ ತಲೆ ಪತ್ತೆಯಾದ ನಂತರ ಉದ್ವಿಗ್ನತೆ ಭುಗಿಲೆದ್ದಿದ್ದು, ನಂತರ ರಾತ್ರಿ ವೇಳೆ ಕಲ್ಲು ತೂರಾಟದ ಘಟನೆಗಳು ನಡೆದಿವೆ.

ಹೆಚ್ಚುತ್ತಿರುವ ಅಶಾಂತಿಯ ಮಧ್ಯೆ, ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಪಟ್ಟಣಕ್ಕೆ ಭೇಟಿ ನೀಡಿದರು. ತೊಂದರೆ ಉಂಟುಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದರು. “

ನಮ್ಮ ದೇವಾಲಯಗಳಿಗೆ ಹಾನಿ ಮಾಡುವ ಉದ್ದೇಶದಿಂದ ಧುಬ್ರಿಯಲ್ಲಿ ಒಂದು ನಿರ್ದಿಷ್ಟ ಗುಂಪು ಸಕ್ರಿಯವಾಗಿದೆ. ಸಂಜೆ 6 ಗಂಟೆಯ ನಂತರ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಗೊಳಿಸಲಾಗುತ್ತದೆ. ಕಲ್ಲು ತೂರಾಟ ನಡೆಸುತ್ತಿರುವವರನ್ನು ಸ್ಥಳದಲ್ಲೇ ಬಂಧಿಸಲಾಗುತ್ತದೆ” ಎಂದು ಸಿಎಂ ಹೇಳಿದರು.

ಬಾಂಗ್ಲಾದೇಶಕ್ಕೆ ಧುಬ್ರಿ ಸೇರಿಸಬೇಕು ಎಂದು ಪ್ರತಿಪಾದಿಸುವ “ನಬಿನ್ ಬಾಂಗ್ಲಾ” ಗುಂಪು ಈದ್ ಹಬ್ಬದಂದು ಪೋಸ್ಟರ್‌ಗಳನ್ನು ಹಾಕಿದೆ. ಇದು ಗಡಿಯಾಚೆಗಿನ ಪ್ರಭಾವದ ಸಂಕೇತವಾಗಿದೆ ಎಂದು ಶರ್ಮಾ ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...