thekarnatakatoday.com
News

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಆರಂಭಿಸಿದ ಎನ್ ಐಎ

“ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.

ಎನ್‌ಐಎ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೇತೃತ್ವದ ತಂಡ, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಪ್ರಾರಂಭಿಸಿದೆ.

ಮಂಗಳೂರು ಪೊಲೀಸರು ಎನ್‌ಐಎ ತಂಡದ ಆಗಮನವನ್ನು ದೃಢಪಡಿಸಿದ್ದು, ಪ್ರಾಥಮಿಕ ಮಾಹಿತಿಯನ್ನು ನಗರ ಅಪರಾಧ ಶಾಖೆ(ಸಿಸಿಬಿ) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಪ್ರಕರಣವನ್ನು NIA ಗೆ ವರ್ಗಾಯಿಸಿತ್ತು. ಅಧಿಕೃತ ಮೂಲಗಳ ಪ್ರಕಾರ, ಸುಹಾಸ್ ಶೆಟ್ಟಿ ಅವರ “ಹತ್ಯೆ”, “ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವ” ಉದ್ದೇಶಿತ ಕೃತ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎನ್ಐಎ ನಿರ್ದೇಶನ ನೀಡಿತ್ತು

Related posts

ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

The Karnataka Today

ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದ ದ ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಲ್ಲಿ ಅವ್ಯವಹಾರ ಹಾಗೂ ನಿಯಮ ಉಲ್ಲಂಘನೆ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ದೂರು

The Karnataka Today

ಕಳಸ ಬಂಡೂರಿ ಯೋಜನೆ ಶೀಘ್ರವೇ ಅನುಮತಿ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಡಿಕೆ ಶಿವಕುಮಾರ್

The Karnataka Today

Leave a Comment