ಇಂಪಲ್ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ 300ಕ್ಕೂ ಹೆಚ್ಚು ಬಂದೂಕು ಹಾಗೂ ಅಪಾರ ಪ್ರಮಾಣದ ಮದ್ದು ಗುಂಡು ವಶಪಡಿಸಿಕೊಂಡ ಸೇನೆ

70

“ಜೂನ್ 13 ಮತ್ತು 14 ರ ಮಧ್ಯರಾತ್ರಿ ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪುರ ಪೊಲೀಸರು ಮತ್ತು ಭದ್ರತಾ ಪಡೆಗಳು 300ಕ್ಕೂ ಹೆಚ್ಚು ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಒಟ್ಟಾರೆಯಾಗಿ 328 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪೈಕಿಎಸ್‌ಎಲ್‌ಆರ್ 151, ಐಎನ್‌ಎಸ್‌ಎಎಸ್ 65, ಇತರ ರೀತಿಯ ರೈಫಲ್‌ಗಳು 73, ಕಾರ್ಬೈನ್‌ಗಳು 5, ಎಂಪಿ5 ಎರಡು, ಎಲ್‌ಎಂಜಿ 12, ಎಕೆ ಸರಣಿ ರೈಫಲ್‌ಗಳು 6, ಅಮೋಘ ರೈಫಲ್‌ಗಳು ಎರಡು, ಮಾರ್ಟರ್ ಒಂದು, ಪಿಸ್ತೂಲ್‌ಗಳು 6, ಬ್ಯಾರೆಲ್‌ಗಳು ಎರಡು, ಎಆರ್ 15 ಗನ್ ಒಂದು ಮತ್ತು ಫ್ಲೇರ್ ಗನ್‌ಗಳು ಎರಡು ಸೇರಿವೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಲಾರಿ ದೋರ್ಜಿ ಲಾಟೂ ಅವರ ಪ್ರಕಾರ, ಇಂಫಾಲ್ ಕಣಿವೆ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

“ಗುಪ್ತಚರ ಮಾಹಿತಿ ಆಧಾರಿತ ಈ ಕಾರ್ಯಾಚರಣೆ, ಮಣಿಪುರ ಪೊಲೀಸ್ ಮತ್ತು ಭದ್ರತಾ ಪಡೆಗಳು ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ನಾಗರಿಕರು ಮತ್ತು ಅವರ ಆಸ್ತಿಯ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳಲ್ಲಿ ಪ್ರಮುಖ ಸಾಧನೆಯನ್ನು ಗುರುತಿಸುತ್ತದೆ” ಎಂದು ಮಣಿಪುರ ಪೊಲೀಸರು ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...