thekarnatakatoday.com
News

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಘರ್ ವಾಪಾಸಿ

“ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.


ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ

. ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು…ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ.

ತಾನು ಯಾವುದು ಕೈಹಿಡಿತಿರಲಿಲ್ಲವಂತೆ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದನಂತೆ.

ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದನಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರಿಶ್ಚಿಯನ್ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.

Related posts

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ:: ಸಿ ಟಿ ರವಿ

The Karnataka Today

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ.1 ರಂದು ಸೇವೆ ಖಾಯಂ ಸಿಎಂ ಸಿದ್ದರಾಮಯ್ಯ ಘೋಷಣೆ

The Karnataka Today

ದೇವಸ್ಥಾನ ಉತ್ಸವಕ್ಕೆ ಬಂದಿದ್ದ ಆನೆ ಉದ್ವಿಗ್ನಗೊಂಡು ಜನರ ಮೇಲೆ ದಾಳಿ 20ಮಂದಿಗೆ ಗಾಯ

The Karnataka Today

Leave a Comment