ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

51

” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 2749 F ವಿಮಾನದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಲಗೇಜ್ ಸೀಟ್ ಬಳಿ ಇರಿಸಿದ್ದಕ್ಕೆ ವಿಮಾನ ಸಿಬ್ಬಂದಿ ಪ್ರಶ್ನಿಸಿದಾಗ ಅನುಚಿತವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ. ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಮಹಿಳೆ ಅದನ್ನು ಪ್ರಶ್ನಿಸಿದ ಸಹ ಪ್ರಯಾಣಿಕರ ಮೇಲೂ ಹಲ್ಲೆ ಮಾಡಿದ್ದಾರೆ.

ಮೂಲಗಳ ಪ್ರಕಾರ ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ಇಡೀ ಗಲಾಟೆಯ ಕೇಂದ್ರ ಬಿಂದುವಾಗಿದ್ದು, ಜೂನ್ 17ರಂದು ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಎರ್ ಇಂಡಿಯಾ ವಿಮಾನದಲ್ಲಿ ತಮ್ಮ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿ ಇಡದೇ ತಮ್ಮ ಸೀಟ್ ನ ಪಕ್ಕದಲ್ಲಿ ಇರಿಸಿಕೊಂಡಿದ್ದಾರೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಸಿಬ್ಬಂದಿಗೆ ದೂರಿದ್ದಾರೆ.

ವಿಮಾನ ತಜ್ಞರು ಹೇಳೋದೇನು? ಬಳಿಕ ಮಹಿಳೆಯ ಬಳಿ ಬಂದ ಸಿಬ್ಬಂದಿ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿಡುವಂತೆ ಸೂಚಿಸಿದ್ದಾರೆ. ಈ ವೇಳೆ ಮಹಿಳೆ ವಾಕ್ಸಮರ ನಡೆಸಿದ್ದಾರೆ.

ಸಿಬ್ಬಂದಿಯ ಜೊತೆ ಕಿರಿಕ್ ಮಾಡಿದ ಮಹಿಳೆ, ಸಹ ಪ್ರಯಾಣಿಕರೊಂದಿಗೂ ರಂಪಾಟ ಮಾಡಿದ್ದಾಳೆ. ವಿಮಾನ ಸಿಬ್ಬಂದಿ ಮಹಿಳೆಯನ್ನು ಇಳಿಸಿ ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ನೀಡಿದ್ದಾರೆ

. ಅಷ್ಟಕ್ಕೂ ಸುಮ್ಮನಾಗದ ಮಹಿಳೆ ಪೊಲೀಸ್ ಠಾಣೆಯಲ್ಲೂ ಕಿರಿಚಾಡಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪವಿದೆ.

ಸದ್ಯ ಮಹಿಳೆ ವಿರುದ್ಧ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕೆಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ವಿಮಾನದಲ್ಲಿನ ಮಹಿಳೆಯ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...