ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

34

” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 2749 F ವಿಮಾನದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಲಗೇಜ್ ಸೀಟ್ ಬಳಿ ಇರಿಸಿದ್ದಕ್ಕೆ ವಿಮಾನ ಸಿಬ್ಬಂದಿ ಪ್ರಶ್ನಿಸಿದಾಗ ಅನುಚಿತವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ. ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಮಹಿಳೆ ಅದನ್ನು ಪ್ರಶ್ನಿಸಿದ ಸಹ ಪ್ರಯಾಣಿಕರ ಮೇಲೂ ಹಲ್ಲೆ ಮಾಡಿದ್ದಾರೆ.

ಮೂಲಗಳ ಪ್ರಕಾರ ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ಇಡೀ ಗಲಾಟೆಯ ಕೇಂದ್ರ ಬಿಂದುವಾಗಿದ್ದು, ಜೂನ್ 17ರಂದು ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಎರ್ ಇಂಡಿಯಾ ವಿಮಾನದಲ್ಲಿ ತಮ್ಮ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿ ಇಡದೇ ತಮ್ಮ ಸೀಟ್ ನ ಪಕ್ಕದಲ್ಲಿ ಇರಿಸಿಕೊಂಡಿದ್ದಾರೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಸಿಬ್ಬಂದಿಗೆ ದೂರಿದ್ದಾರೆ.

ವಿಮಾನ ತಜ್ಞರು ಹೇಳೋದೇನು? ಬಳಿಕ ಮಹಿಳೆಯ ಬಳಿ ಬಂದ ಸಿಬ್ಬಂದಿ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿಡುವಂತೆ ಸೂಚಿಸಿದ್ದಾರೆ. ಈ ವೇಳೆ ಮಹಿಳೆ ವಾಕ್ಸಮರ ನಡೆಸಿದ್ದಾರೆ.

ಸಿಬ್ಬಂದಿಯ ಜೊತೆ ಕಿರಿಕ್ ಮಾಡಿದ ಮಹಿಳೆ, ಸಹ ಪ್ರಯಾಣಿಕರೊಂದಿಗೂ ರಂಪಾಟ ಮಾಡಿದ್ದಾಳೆ. ವಿಮಾನ ಸಿಬ್ಬಂದಿ ಮಹಿಳೆಯನ್ನು ಇಳಿಸಿ ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ನೀಡಿದ್ದಾರೆ

. ಅಷ್ಟಕ್ಕೂ ಸುಮ್ಮನಾಗದ ಮಹಿಳೆ ಪೊಲೀಸ್ ಠಾಣೆಯಲ್ಲೂ ಕಿರಿಚಾಡಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪವಿದೆ.

ಸದ್ಯ ಮಹಿಳೆ ವಿರುದ್ಧ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕೆಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ವಿಮಾನದಲ್ಲಿನ ಮಹಿಳೆಯ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...