ಉಡುಪಿ ಜಿಲ್ಲಾ ನೂತನ ಪೊಲೀಸವರಿಷ್ಠಾಧಿಕಾರಿಯವರನ್ನು ಬೇಟಿ ಮಾಡಿ ಅಭಿನಂದಿಸಿದ ಉಡುಪಿ ವಕೀಲರ ನಿಯೋಗ

36

*ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು

. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು.

ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು

. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಶ್ರೀ ರಾಜೇಶ್ ಎ.ಆರ್., ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ಸಂತೋಷ್ ಮೂಡುಬೆಳ್ಳೆ, ಶ್ರೀ ಜಯಕೃಷ್ಣ ಆಳ್ವ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.*

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...