ಜುಲೈ 24ರವರೆಗೆ ಪಾಕ್ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ವಿಮಾನಯಾನ ಸಚಿವಾಲಯದಿಂದ ಅಧಿಕೃತವಾಗಿ ಘೋಷಣೆ

35

ಇಸ್ಲಾಮಾಬಾದ್: ಭಾರತೀಯ ವಿಮಾನಗಳ ಮೇಲಿನ ವಾಯುಪ್ರದೇಶ ನಿರ್ಬಂಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.

ಜುಲೈ 24ರ ಬೆಳಗ್ಗೆ 5-29ರವರೆಗೂ ಪಾಕಿಸ್ತಾನದ ವಿಮಾನಗಳಿಗೆ ವಾಯು ಪ್ರದೇಶವನ್ನು ವಿಸ್ತರಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ರಾತ್ರಿ ಇದನ್ನು ಅಧಿಕೃತವಾಗಿ ಘೋಷಿಸಿದೆ.

ಭಾರತ ಕೂಡಾ ಜುಲೈ 24ರ ಬೆಳಗ್ಗೆ 5-29ರವರೆಗೂ ಪಾಕಿಸ್ತಾನದ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧವನ್ನು ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದೆ

. ಇದಕ್ಕೂ ಮುನ್ನಾ ಪಾಕಿಸ್ತಾನ ಇದೇ ದಿನದವರೆಗೂ ಭಾರತದ ವಿಮಾನಗಳಿಗೆ ತನ್ನ ವಾಯುಪ್ರದೇಶ ನಿರ್ಭಂದವನ್ನು ವಿಸ್ತರಿಸಿರುವುದಾಗಿ ಘೋಷಿಸಿತ್ತು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಪ್ರಿಲ್ 23 ರಂದು ಒಂದು ತಿಂಗಳ ಕಾಲ ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ನಿರ್ಬಂಧಿಸಿತ್ತು.

ನಂತರ, ಮೇ 7 ರಂದು ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ, ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ್ದರಿಂದ ನಾಲ್ಕು ದಿನಗಳ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದರಿಂದ ಮೇ 23 ರಂದು ಅದನ್ನು ಮತ್ತೊಂದು ತಿಂಗಳು ವಿಸ್ತರಿಸಲಾಯಿತು.

ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಇನ್ನೊಂದು ತಿಂಗಳು ವಿಸ್ತರಿಸಿದ ಪಾಕ್ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಹೊರಡಿಸಿದ ನೋಟಾಮ್ ಅಥವಾ ವಾಯುಪಡೆಗಳಿಗೆ ಸೂಚನೆಯ ಪ್ರಕಾರ, ನಿಷೇಧವನ್ನು ಜೂನ್ 23 ರಿಂದ ಜುಲೈ 23 ರವರೆಗೆ ವಿಸ್ತರಿಸಲಾಗಿದೆ.

ಭಾರತೀಯ ನೋಂದಾಯಿತ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳು/ನಿರ್ವಾಹಕರು ನಿರ್ವಹಿಸುವ/ಮಾಲೀಕತ್ವದ ಅಥವಾ ಗುತ್ತಿಗೆ ಪಡೆದ ವಿಮಾನಗಳಿಗೆ ಪಾಕಿಸ್ತಾನ ವಾಯುಪ್ರದೇಶ ಲಭ್ಯವಿಲ್ಲ” ಎಂದು ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

“ಫೆಬ್ರವರಿ 17 ರಂದು ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು...

ಮಾಜಿ ಪ್ರಧಾನಮಂತ್ರಿ ಖಾಲೇದಾ ಜಿಯಾ ಪುತ್ರ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ ಪಿ ಪಕ್ಷ ಕ್ಕೆ ಬಹುಮತ ಪ್ರಧಾನಿ ಮೋದಿ ಅಭಿನಂದನೆ

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು...

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...