thekarnatakatoday.com
Crime

ಕಾನೂನು ವಿದ್ಯಾರ್ಥಿನಿ ಮೇಲೆ ಟಿಎಂಸಿಪಿ ಕಾರ್ಯಕರ್ತ ಸೇರಿದಂತೆ ಮೂವರಿಂದ ಅತ್ಯಾಚಾರ ಆರೋಪಿಗಳ ಬಂಧನ

ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ಪಿ ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು.

ಆರೋಪಿಗಳಲ್ಲಿ ಇಬ್ಬರನ್ನು ಗುರುವಾರ ಸಂಜೆ ಬಂಧಿಸಲಾಗಿದ್ದು, ಮೂರನೆಯವನನ್ನು ಮಧ್ಯರಾತ್ರಿಯ ಸುಮಾರಿಗೆ ಬಂಧಿಸಲಾಗಿದೆ.


. ಸಂತ್ರಸ್ತೆಯ ದೂರಿನ ಪ್ರಕಾರ, ಈ ಘಟನೆ ಜೂನ್ 25 ಬುಧವಾರ ಸಂಜೆ 7:30 ರಿಂದ ರಾತ್ರಿ 10:50 ರ ನಡುವೆ ನಡೆದಿದೆ.

ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು. ಆರೋಪಿಗಳಲ್ಲಿ ಇಬ್ಬರನ್ನು ಗುರುವಾರ ಸಂಜೆ ಬಂಧಿಸಲಾಗಿದ್ದು, ಮೂರನೆಯವರನ್ನು ಮಧ್ಯರಾತ್ರಿಯ ಸುಮಾರಿಗೆ ಬಂಧಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಕಾಲೇಜಿನ ಮಾಜಿ ವಿದ್ಯಾರ್ಥಿ ಮನೋಜಿತ್ ಮಿಶ್ರಾ (31) ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ, ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖೋಪಾಧ್ಯಾಯ (20) ಬಂಧಿತ ಆರೋಪಿಗಳಾಗಿದ್ದಾರೆ.

ಮನೋಜಿತ್ ಮಿಶ್ರಾ ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛತ್ರ ಪರಿಷತ್ (TMCP) ಜೊತೆ ಸಂಬಂಧ ಹೊಂದಿದ್ದಾನೆ.

ಆತನ ಫೇಸ್‌ಬುಕ್ ಪ್ರೊಫೈಲ್ ನಲ್ಲಿ TMCP ಯ ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಎಂದು ಬರೆದುಕೊಂಡಿದ್ದಾನೆ. ಆತ ಅಲಿಪೋರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ವಕೀಲನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾನೆ. ಇತರ ಇಬ್ಬರು ಆರೋಪಿಗಳು ಸಹ ಟಿಎಂಸಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿಪಿ ರಾಜ್ಯ ಅಧ್ಯಕ್ಷ ತೃಣಂಕೂರ್ ಭಟ್ಟಾಚಾರ್ಯ, “ತೃಣಮೂಲ ಪಕ್ಷದ ಯಾರೇ ಆದರೂ ಈ ಘಟನೆಯಲ್ಲಿ ಭಾಗಿಯಾಗಿರಲಿ ಅಥವಾ ಇಲ್ಲದಿರಲಿ, ಸೂಕ್ತ ಕ್ರಮ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ

. ಆರೋಪಿತ ವ್ಯಕ್ತಿ ಪ್ರಸ್ತುತ ಕಾಲೇಜಿನ ಉದ್ಯೋಗಿ, ಆತ ವಿದ್ಯಾರ್ಥಿ ಪರಿಷತ್ತಿನೊಂದಿಗೆ ಸಂಬಂಧ ಹೊಂದಿಲ್ಲ. ಈ ಘಟನೆ ಮತ್ತು ಆರೋಪ ನಿಜವಾಗಿದ್ದರೆ, ಅವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲು ಟಿಎಂಸಿ ಹೋರಾಟ ನಡೆಸುತ್ತದೆ ಎಂದಿದ್ದಾರೆ.

ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಏತನ್ಮಧ್ಯೆ, ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದು, 72 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

Related posts

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ  ದಿನಸಿ ಖರೀದಿಗೆ ಅಂಗಡಿಗೆ ಬರುತ್ತಿದ್ದ ಯುವತಿ ಮೇಲೆ ಲೈಂಗಿಕ ಕಿರುಕುಳ ಐದು ಮಂದಿ ಆರೋಪಿಗಳ ಬಂಧನ

The Karnataka Today

ಕಾರವಾರಹಾಗೂ ಕೊಚ್ಚಿ ನೌಕಾ ಸೇನಾ ನೆಲೆಗಳ ಮಾಹಿತಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಮೂವರ ಬಂಧನ

The Karnataka Today

14 ವರ್ಷದ ಬಾಲಕಿಯ ಜೊತೆಗೆ ಬಲವಂತದಿಂದ ದೈಹಿಕ ಸಂಪರ್ಕ ದ ವೇಳೆಯಲ್ಲಿ ಮೃತಪಟ್ಟ ವ್ಯಕ್ತಿ

The Karnataka Today

Leave a Comment