ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಕಾವೇರಿ ಆರತಿಗೆ ವಿಚಾರವಾಗಿ ಸರಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

35

ಬೆಂಗಳೂರು: ಕೃಷ್ಣರಾಜ ಸಾಗರ(ಕೆಆರ್‌ಎಸ್) ಜಲಾಶಯದ ಬಳಿ ಉದ್ದೇಶಿತ ಕಾವೇರಿ ಆರತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,

ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದು ಸಂಭಾವ್ಯ ಪರಿಸರ ಮತ್ತು ಸುರಕ್ಷತಾ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ.

ಅರ್ಜಿದಾರರಾದ ಸುನಂದಾ ಜಯರಾಮ್ ಪರವಾಗಿ ಹಾಜರಾದ ವಕೀಲ ರಾಜಣ್ಣ ಆರ್ ಅವರ ಪ್ರಾಥಮಿಕ ವಾದಗಳನ್ನು ಪರಿಗಣಿಸಿದ ನಂತರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್

ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ನೇತೃತ್ವದ ವಿಭಾಗೀಯ ಪೀಠ, ಎಲ್ಲಾ ಪ್ರತಿವಾದಿಗಳು ಎರಡು ವಾರಗಳಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.

ಡ್ಯಾಮ್ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಅದರ ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೊ ಸಹ ಸಲ್ಲಿಕೆ ಮಾಡಲಾಗಿದೆ.

ಕಾಮಗಾರಿಗೆ ಅಗೆಯುವುದರಿಂದ ಡ್ಯಾಂಗೆ ಹಾನಿಯಾಗುವುದಿಲ್ಲವೇ? ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ?

ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರವನ್ನು ಹಾಗೂ ಕಾವೇರಿ ನೀರಾವರಿ ನಿಗಮವನ್ನು ಹೈಕೋರ್ಟ್ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಸರ್ಕಾರ ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಹೈಕೋರ್ಟ್ಗೆ ತಿಳಿಸಿದೆ.

ಈ ಬೆಳವಣಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಮನರಂಜನಾ ಪಾರ್ಕ್ ಹಾಗೂ ಕಾವೇರಿ ಆರತಿ ಯೋಜನೆಗಳಿಗೆ ತುಸು ಹಿನ್ನಡೆಯಾದಂತಾಗಿದೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...