ತನ್ನ ಪಕ್ಷದ ಅತ್ಯಾಚಾರಿ ಆರೋಪಿ ಪರವಾಗಿ ಸ್ನೇಹಿತನೇ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ರೆ ಏನು ಮಾಡಲು ಸಾಧ್ಯ ಎಂಬ ಹೇಳಿಕೆ ನೀಡಿದ ಟಿಎಂಸಿ ಸಂಸದನ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ

63

“ದಕ್ಷಿಣ ಕೊಲ್ಕತ್ತಾದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಕುರಿತು ತೃಣಮೂಲ ಕಾಂಗ್ರೆಸ್‌ನ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ! ಎಂಬ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ.

ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಪೊಲೀಸರು ಶಾಲೆಗಳಲ್ಲಿ ಇರುತ್ತಾರೆಯೇ? ಓರ್ವ ವಿದ್ಯಾರ್ಥಿ ಇನ್ನೋರ್ವ ವಿದ್ಯಾರ್ಥಿಗೆ ಇದನ್ನು ಮಾಡಿದ್ದಾರೆ. ಹಾಗಾದರೆ ಸಂತ್ರಸ್ತೆಯನ್ನು ಯಾರು ರಕ್ಷಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ

. ಈ ಎಲ್ಲಾ ಅಪರಾಧ ಮತ್ತು ಕಿರುಕುಳವನ್ನು ಯಾರು ಮಾಡುತ್ತಾರೆ? ಕೆಲ ಪುರುಷರು ಮಾಡ್ತಾರೆ. ಆದ್ದರಿಂದ, ಮಹಿಳೆಯರು ಯಾರ ವಿರುದ್ಧ ಹೋರಾಡಬೇಕು? ಮಹಿಳೆಯರು ಈ ವಿಕೃತ ಪುರುಷರ ವಿರುದ್ಧ ಹೋರಾಡಬೇಕು” ಎಂದು ಹೇಳಿದ್ದಾರೆ.

ಇಂತಹ ಹೇಳಿಕೆಗಳು ಸರ್ಕಾರ ಹೊಣೆಗಾರಿಕೆಯನ್ನು ದಿಕ್ಕು ತಪ್ಪಿಸುವಂತೆ ತೋರುತ್ತಿವೆ ಎಂಬ ಟೀಕೆಗೆ ಗುರಿಯಾಗಿದೆ. ಪ್ರಮುಖ ಆರೋಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ನಡುವಿನ ಸಂಪರ್ಕವನ್ನು ತಿಳಿಸಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.

ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಬುಧವಾರ ತಡರಾತ್ರಿ ಭದ್ರತಾ ಕೊಠಡಿಯಲ್ಲಿ 24 ವರ್ಷದ ಕೋಲ್ಕತ್ತಾ ಕಾಲೇಜು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆದಿತ್ತು

ಸಂತ್ರಸ್ಥೆ ನೀಡಿರುವ ದೂರಿನಲ್ಲಿ ಏನಿದೆ? ಸಂತ್ರಸ್ತೆ ನೀಡಿರುವ ಪೊಲೀಸ್ ದೂರಿನ ಪ್ರಕಾರ, ವಿದ್ಯಾರ್ಥಿ ಸಂಘದ ಕಚೇರಿಯ ಪಕ್ಕದಲ್ಲಿರುವ ಸೆಕ್ಯೂರಿಟಿ ಗಾರ್ಡ್ ಕೊಠಡಿಗೆ ಮೂವರು ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಅವರಲ್ಲಿ 31 ವರ್ಷದ ಮಾಜಿ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಮತ್ತಿಬ್ಬರು ಪಕ್ಕದಲ್ಲಿ ನಿಂತು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಮುಖ ಆರೋಪಿ ಮನೋಜಿತ್ ಮಿಶ್ರಾಗೆ ಆಡಳಿತಾರೂಢ ಟಿಎಂಸಿ ಜೊತೆಗೆ ನಂಟಿದೆ ಎನ್ನಲಾಗುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...