ತನ್ನ ಪಕ್ಷದ ಅತ್ಯಾಚಾರಿ ಆರೋಪಿ ಪರವಾಗಿ ಸ್ನೇಹಿತನೇ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ರೆ ಏನು ಮಾಡಲು ಸಾಧ್ಯ ಎಂಬ ಹೇಳಿಕೆ ನೀಡಿದ ಟಿಎಂಸಿ ಸಂಸದನ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ

41

“ದಕ್ಷಿಣ ಕೊಲ್ಕತ್ತಾದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಕುರಿತು ತೃಣಮೂಲ ಕಾಂಗ್ರೆಸ್‌ನ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ! ಎಂಬ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ.

ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಪೊಲೀಸರು ಶಾಲೆಗಳಲ್ಲಿ ಇರುತ್ತಾರೆಯೇ? ಓರ್ವ ವಿದ್ಯಾರ್ಥಿ ಇನ್ನೋರ್ವ ವಿದ್ಯಾರ್ಥಿಗೆ ಇದನ್ನು ಮಾಡಿದ್ದಾರೆ. ಹಾಗಾದರೆ ಸಂತ್ರಸ್ತೆಯನ್ನು ಯಾರು ರಕ್ಷಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ

. ಈ ಎಲ್ಲಾ ಅಪರಾಧ ಮತ್ತು ಕಿರುಕುಳವನ್ನು ಯಾರು ಮಾಡುತ್ತಾರೆ? ಕೆಲ ಪುರುಷರು ಮಾಡ್ತಾರೆ. ಆದ್ದರಿಂದ, ಮಹಿಳೆಯರು ಯಾರ ವಿರುದ್ಧ ಹೋರಾಡಬೇಕು? ಮಹಿಳೆಯರು ಈ ವಿಕೃತ ಪುರುಷರ ವಿರುದ್ಧ ಹೋರಾಡಬೇಕು” ಎಂದು ಹೇಳಿದ್ದಾರೆ.

ಇಂತಹ ಹೇಳಿಕೆಗಳು ಸರ್ಕಾರ ಹೊಣೆಗಾರಿಕೆಯನ್ನು ದಿಕ್ಕು ತಪ್ಪಿಸುವಂತೆ ತೋರುತ್ತಿವೆ ಎಂಬ ಟೀಕೆಗೆ ಗುರಿಯಾಗಿದೆ. ಪ್ರಮುಖ ಆರೋಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ನಡುವಿನ ಸಂಪರ್ಕವನ್ನು ತಿಳಿಸಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.

ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಬುಧವಾರ ತಡರಾತ್ರಿ ಭದ್ರತಾ ಕೊಠಡಿಯಲ್ಲಿ 24 ವರ್ಷದ ಕೋಲ್ಕತ್ತಾ ಕಾಲೇಜು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆದಿತ್ತು

ಸಂತ್ರಸ್ಥೆ ನೀಡಿರುವ ದೂರಿನಲ್ಲಿ ಏನಿದೆ? ಸಂತ್ರಸ್ತೆ ನೀಡಿರುವ ಪೊಲೀಸ್ ದೂರಿನ ಪ್ರಕಾರ, ವಿದ್ಯಾರ್ಥಿ ಸಂಘದ ಕಚೇರಿಯ ಪಕ್ಕದಲ್ಲಿರುವ ಸೆಕ್ಯೂರಿಟಿ ಗಾರ್ಡ್ ಕೊಠಡಿಗೆ ಮೂವರು ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಅವರಲ್ಲಿ 31 ವರ್ಷದ ಮಾಜಿ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಮತ್ತಿಬ್ಬರು ಪಕ್ಕದಲ್ಲಿ ನಿಂತು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಮುಖ ಆರೋಪಿ ಮನೋಜಿತ್ ಮಿಶ್ರಾಗೆ ಆಡಳಿತಾರೂಢ ಟಿಎಂಸಿ ಜೊತೆಗೆ ನಂಟಿದೆ ಎನ್ನಲಾಗುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...