ಮಾನಸಿಕ ಅಸ್ವಸ್ಥನಾಗಿ ರಸ್ತೆಯಲ್ಲಿ ಅಲೆಯುತ್ತಿದ್ದ ಮುಂಬಯಿ ವ್ಯಕ್ತಿಗೆ  ಚಿಕಿತ್ಸೆ ನೀಡಿ ಮರಳಿ, ಕುಟುಂಬದವರೊಂದಿಗೆ ಸೇರಿಸಿದ ನಿಸ್ವಾರ್ಥ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ

30

ದೂರದ ಮುಂಬಯಿ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿ ಉಡುಪಿ ಜಿಲ್ಲೆಯ ಕಾಪು ಸಮೀಪ ಪತ್ತೆಯಾಗಿದ್ದ ಸಂದರ್ಭದಲ್ಲಿ ರಕ್ಷಣೆ ಹಾಗೂ ಚಿಕಿತ್ಸೆ ನೀಡಿ ಮರಳಿ ಕುಟುಂಬದೊಂದಿಗೆ ಸೇರಿಸಿದ ನಿಸ್ವಾರ್ಥ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ  

ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥ ಯೂಸುಫ್ ಕುಟುಂಬಕ್ಕೆ ಹಸ್ತಾಂತರ: ಸಂತೋಷಗೊಂಡ ಕುಟುಂಬಸ್ಥರಿಂದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಆಶ್ರಯ ನೀಡಿದ್ದ ಸ್ವರ್ಗ ಆಶ್ರಮ ಡಾಕ್ಟರ ಹೋಂ ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಕೆ

ಉಡುಪಿ ಜೂ.28: ಕಳೆದ ಒಂದೂವರೆ ತಿಂಗಳ ಹಿಂದೆ ಕಾಪು ಠಾಣಾ ವ್ಯಾಪ್ತಿಯಲ್ಲಿ ವಿಶು ಶೆಟ್ಟಿ ಅಂಬಲಪಾಡಿಯವರಿಂದ ರಕ್ಷಿಸಲ್ಪಟ್ಟ ಮನೋರೋಗಿ ಯುವಕ ಯೂಸುಫ್ ನ ಕುಟುಂಬ ಪತ್ತೆಯಾಗಿದ್ದು ತಂದೆಯ ವಶಕ್ಕೆ ನೀಡಲಾಯಿತು.

ಯುವಕ ಯೂಸುಫ್ ತಡರಾತ್ರಿ ಸಾರ್ವಜನಿಕರ ಮನೆಗಳಿಗೆ ಹೋಗಿದ್ದು ಸಂಶಯಗೊಂಡ ಸಾರ್ವಜನಿಕರು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದರು. ಈ ಸಮಯ ಜಯಶ್ರೀ ಉದ್ಯಾವರ ಅವರಿಂದ ಮಾಹಿತಿ ಪಡೆದ ವಿಶು ಶೆಟ್ಟಿ ತಡರಾತ್ರಿ ಸ್ಥಳಕ್ಕೆ ಧಾವಿಸಿ ಯುವಕನನ್ನು ಪರಿಶೀಲಿಸಿದಾಗ ಮಾನಸಿಕ ಅಸ್ವಸ್ಥ ಎಂಬುದು ಸಾಬೀತಾಗಿದ್ದು ಕೂಡಲೇ ಯುವಕನನ್ನು ಸಂತೈಸಿ ಔಷಧಿ ಹಾಗೂ ಸಲಹಲು ಸ್ವರ್ಗ ಆಶ್ರಮಕ್ಕೆ ದಾಖಲಿಸಿದ್ದರು.

ಸ್ವರ್ಗ ಆಶ್ರಮದಲ್ಲಿ ಯುವಕನು ಬಹಳಷ್ಟು ಸುಧಾರಣೆಗೊಂಡು ಸಜಜ ಸ್ಥಿತಿಗೆ ಬರುತ್ತಿದ್ದನು. ವಿಶು ಶೆಟ್ಟಿ ಯುವಕನ ಭಾವಚಿತ್ರ ಹಾಗೂ ವಿವರಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದರು. ಸಂಬಂಧಿಕರ ಪತ್ತೆಗೆ ಪ್ರಯತ್ನಿಸಿದ್ದರು.

ಪರಿಚಯಸ್ಥರೊಬ್ಬರ ಸಹಾಯದಿಂದ ಈ ವಿಷಯ ಮುಂಬೈ ಮೂಲದ ಯೂಸುಫ್ ನ ಮನೆಯವರಿಗೆ ಮಾಹಿತಿ ಲಭಿಸಿ ವಿಶು ಶೆಟ್ಟಿಯನ್ನು ಸಂಪರ್ಕಿಸಲು ಯೂಸುಫ್ ನ ತಂದೆ ಸಲೀಂ ಉಡುಪಿಗೆ ಬಂದಿದ್ದಾರೆ. ಸ್ವರ್ಗ ಆಶ್ರಮದ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ ಸಿಬ್ಬಂದಿ ಹಾಗೂ ವಿಶು ಶೆಟ್ಟಿ ಯೂಸಫ್ ನನ್ನು ತಂದೆಗೆ ಹಸ್ತಾಂತರಿಸಿ ಕಳುಹಿಸಿದ್ದಾರೆ.

ಇದೀಗ ತನ್ನ ಊರಾದ ಮುಂಬೈಗೆ ಹೊರಟಿದ್ದು ರಕ್ಷಿಸಿದ ವಿಶು ಶೆಟ್ಟಿ ಹಾಗೂ ಚಿಕಿತ್ಸೆ ನೀಡಿ ಆರೈಕೆ ಮಾಡಿದ ಆಶ್ರಮದ ಮುಖ್ಯಸ್ಥರಿಗೆ ಹೃದಯ ತುಂಬಿದ ಧನ್ಯವಾದ ಅರ್ಪಿಸಿದರು.

ಯೂಸುಫ್ ನಾಪತ್ತೆಯಾದ ಮೇಲೆ ತಂದೆ, ತಾಯಿ, ಮಡದಿ, ಪುಟ್ಟ ಮಗಳು ಕಣ್ಣೀರು ಸುರಿಸಿ ಸರಿಯಾಗಿ ಅನ್ನ ಆಹಾರವು ಇಲ್ಲದೆ ಹುಡುಕಾಟ ನಡೆಸಿದ್ದಾರೆ. ಇದೀಗ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...