ಮಾನಸಿಕ ಅಸ್ವಸ್ಥನಾಗಿ ರಸ್ತೆಯಲ್ಲಿ ಅಲೆಯುತ್ತಿದ್ದ ಮುಂಬಯಿ ವ್ಯಕ್ತಿಗೆ  ಚಿಕಿತ್ಸೆ ನೀಡಿ ಮರಳಿ, ಕುಟುಂಬದವರೊಂದಿಗೆ ಸೇರಿಸಿದ ನಿಸ್ವಾರ್ಥ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ

59

ದೂರದ ಮುಂಬಯಿ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿ ಉಡುಪಿ ಜಿಲ್ಲೆಯ ಕಾಪು ಸಮೀಪ ಪತ್ತೆಯಾಗಿದ್ದ ಸಂದರ್ಭದಲ್ಲಿ ರಕ್ಷಣೆ ಹಾಗೂ ಚಿಕಿತ್ಸೆ ನೀಡಿ ಮರಳಿ ಕುಟುಂಬದೊಂದಿಗೆ ಸೇರಿಸಿದ ನಿಸ್ವಾರ್ಥ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ  

ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥ ಯೂಸುಫ್ ಕುಟುಂಬಕ್ಕೆ ಹಸ್ತಾಂತರ: ಸಂತೋಷಗೊಂಡ ಕುಟುಂಬಸ್ಥರಿಂದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಆಶ್ರಯ ನೀಡಿದ್ದ ಸ್ವರ್ಗ ಆಶ್ರಮ ಡಾಕ್ಟರ ಹೋಂ ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಕೆ

ಉಡುಪಿ ಜೂ.28: ಕಳೆದ ಒಂದೂವರೆ ತಿಂಗಳ ಹಿಂದೆ ಕಾಪು ಠಾಣಾ ವ್ಯಾಪ್ತಿಯಲ್ಲಿ ವಿಶು ಶೆಟ್ಟಿ ಅಂಬಲಪಾಡಿಯವರಿಂದ ರಕ್ಷಿಸಲ್ಪಟ್ಟ ಮನೋರೋಗಿ ಯುವಕ ಯೂಸುಫ್ ನ ಕುಟುಂಬ ಪತ್ತೆಯಾಗಿದ್ದು ತಂದೆಯ ವಶಕ್ಕೆ ನೀಡಲಾಯಿತು.

ಯುವಕ ಯೂಸುಫ್ ತಡರಾತ್ರಿ ಸಾರ್ವಜನಿಕರ ಮನೆಗಳಿಗೆ ಹೋಗಿದ್ದು ಸಂಶಯಗೊಂಡ ಸಾರ್ವಜನಿಕರು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದರು. ಈ ಸಮಯ ಜಯಶ್ರೀ ಉದ್ಯಾವರ ಅವರಿಂದ ಮಾಹಿತಿ ಪಡೆದ ವಿಶು ಶೆಟ್ಟಿ ತಡರಾತ್ರಿ ಸ್ಥಳಕ್ಕೆ ಧಾವಿಸಿ ಯುವಕನನ್ನು ಪರಿಶೀಲಿಸಿದಾಗ ಮಾನಸಿಕ ಅಸ್ವಸ್ಥ ಎಂಬುದು ಸಾಬೀತಾಗಿದ್ದು ಕೂಡಲೇ ಯುವಕನನ್ನು ಸಂತೈಸಿ ಔಷಧಿ ಹಾಗೂ ಸಲಹಲು ಸ್ವರ್ಗ ಆಶ್ರಮಕ್ಕೆ ದಾಖಲಿಸಿದ್ದರು.

ಸ್ವರ್ಗ ಆಶ್ರಮದಲ್ಲಿ ಯುವಕನು ಬಹಳಷ್ಟು ಸುಧಾರಣೆಗೊಂಡು ಸಜಜ ಸ್ಥಿತಿಗೆ ಬರುತ್ತಿದ್ದನು. ವಿಶು ಶೆಟ್ಟಿ ಯುವಕನ ಭಾವಚಿತ್ರ ಹಾಗೂ ವಿವರಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದರು. ಸಂಬಂಧಿಕರ ಪತ್ತೆಗೆ ಪ್ರಯತ್ನಿಸಿದ್ದರು.

ಪರಿಚಯಸ್ಥರೊಬ್ಬರ ಸಹಾಯದಿಂದ ಈ ವಿಷಯ ಮುಂಬೈ ಮೂಲದ ಯೂಸುಫ್ ನ ಮನೆಯವರಿಗೆ ಮಾಹಿತಿ ಲಭಿಸಿ ವಿಶು ಶೆಟ್ಟಿಯನ್ನು ಸಂಪರ್ಕಿಸಲು ಯೂಸುಫ್ ನ ತಂದೆ ಸಲೀಂ ಉಡುಪಿಗೆ ಬಂದಿದ್ದಾರೆ. ಸ್ವರ್ಗ ಆಶ್ರಮದ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ ಸಿಬ್ಬಂದಿ ಹಾಗೂ ವಿಶು ಶೆಟ್ಟಿ ಯೂಸಫ್ ನನ್ನು ತಂದೆಗೆ ಹಸ್ತಾಂತರಿಸಿ ಕಳುಹಿಸಿದ್ದಾರೆ.

ಇದೀಗ ತನ್ನ ಊರಾದ ಮುಂಬೈಗೆ ಹೊರಟಿದ್ದು ರಕ್ಷಿಸಿದ ವಿಶು ಶೆಟ್ಟಿ ಹಾಗೂ ಚಿಕಿತ್ಸೆ ನೀಡಿ ಆರೈಕೆ ಮಾಡಿದ ಆಶ್ರಮದ ಮುಖ್ಯಸ್ಥರಿಗೆ ಹೃದಯ ತುಂಬಿದ ಧನ್ಯವಾದ ಅರ್ಪಿಸಿದರು.

ಯೂಸುಫ್ ನಾಪತ್ತೆಯಾದ ಮೇಲೆ ತಂದೆ, ತಾಯಿ, ಮಡದಿ, ಪುಟ್ಟ ಮಗಳು ಕಣ್ಣೀರು ಸುರಿಸಿ ಸರಿಯಾಗಿ ಅನ್ನ ಆಹಾರವು ಇಲ್ಲದೆ ಹುಡುಕಾಟ ನಡೆಸಿದ್ದಾರೆ. ಇದೀಗ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...