ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್‌ಎಸ್  ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

52

“ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು 93 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ

. ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಗೆ ಬಾಗಿನ ಅರ್ಪಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೆಆರ್ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು,

ಸಿಎಂ ಸಿದ್ದರಾಮಯ್ಯ ಅವರು ಜೂನ್ ತಿಂಗಳಿನಲ್ಲಿಯೇ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದರು.

ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಆರ್‌ಎಸ್ ನಿರ್ಮಾತೃಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು. ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸ ಹೆಚ್ಚಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...