ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಘೋಷಣೆ, ಮರಣೋತ್ತರ ಪರೀಕ್ಷೆ ಕಡ್ಡಾಯ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

62

“ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ, ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವರು, ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.

“ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ನಾವು ನಿರ್ಧರಿಸಿದ್ದೇವೆ. ಆಸ್ಪತ್ರೆಗಳ ಹೊರಗೆ ಹಠಾತ್ ಸಾವು ಸಂಭವಿಸಿದರೆ ಅದನ್ನು ಸರ್ಕಾರಕ್ಕೆ ತಿಳಿಸಬೇಕು” ಎಂದು ಸಚಿವರು ಹೇಳಿದರು. “

ಹುಟ್ಟಿನಿಂದಲೇ ರೋಗಗಳನ್ನು ಹೊಂದಿರುವ ಜನ ಇರುವುದರಿಂದ”, ಸುಮಾರು 15 ವರ್ಷ ವಯಸ್ಸಿನ ಮಕ್ಕಳು ಸೇರಿದಂತೆ ಹೆಚ್ಚಿನ ಜನರನ್ನು ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು

ಹೃದಯಾಘಾತ ಮತ್ತು ಹಠಾತ್ ಸಾವುಗಳಿಗೆ ಕಾರಣವಾಗುವ ರೋಗಗಳ ಕುರಿತು ಪಠ್ಯಪುಸ್ತಕಗಳಲ್ಲಿ ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಿಪಿಆರ್ ಕುರಿತು ಜನರಿಗೆ ತರಬೇತಿ ನೀಡಲು ಸಹ ನಿರ್ಧರಿಸಲಾಗಿದೆ

. ಇದಲ್ಲದೆ, ರಾಜ್ಯದ 86 ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಈ ವರ್ಷ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಹಠಾತ್ ಹೃದಯಾಘಾತದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.

ಹಠಾತ್ ಹೃದಯಾಘಾತ ಮತ್ತು ಕೋವಿಡ್ -19 ಸೋಂಕು ಮತ್ತು ಲಸಿಕೆಯೊಂದಿಗೆ ಅವುಗಳ ಸಂಭಾವ್ಯ ಸಂಬಂಧದ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿ, ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ದಿನೇಶ್ ಗೂಂಡುರಾವ್ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...