ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

51

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್ ಕೌಂಟಿಯಲ್ಲಿ ಸಿಲುಕಿಕೊಂಡಿದ್ದಾರೆ. ಟಿಬೆಟ್ ಮತ್ತು ನೇಪಾಳವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ.

ಆ ಗುಂಪಿನಲ್ಲಿರುವ ಇಬ್ಬರು ಮಹಿಳೆಯರ ಪರಿಚಯವಿರುವ ಪತ್ರಕರ್ತೆಯೊಬ್ಬರು ಸ್ಥಳೀಯ ಅಧಿಕಾರಿಗಳಿಂದ ಇನ್ನೂ ಯಾವುದೇ ಸಹಾಯ ಬಂದಿಲ್ಲ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪರಿಶೀಲಿಸುವಂತೆ ಅವರು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಅವರ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

ನೇಪಾಳ ಮತ್ತು ಚೀನಾ ನಡುವಿನ ಗಡಿಯನ್ನು ರಸುವಾ ಜಿಲ್ಲೆಯಲ್ಲಿ ರೂಪಿಸುವ ಭೋಟೆಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹವು ಮಿಟೇರಿ ಸೇತುವೆ ಮತ್ತು ಒಣ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಹಲವಾರು ವಾಹನಗಳನ್ನು ಕೊಚ್ಚಿ ಹಾಕಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಚೀನಾದ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹವು ಗಡಿ ಪ್ರದೇಶವನ್ನು ಅಪ್ಪಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...

ಅಮೇರಿಕಾ ನಾಯಕರ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ‘ಈ ಭೂಮಿ ಮೇಲಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ನ್ನು ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು...

ಅಮೆರಿಕಕ್ಕೆ ರಷ್ಯಾ ಹೊಸ ಸವಾಲು ತೈಲ ಟ್ಯಾಂಕರ್ ಗಳ ರಕ್ಷಣೆಗೆ ತನ್ನ ಅತ್ಯಾಧುನಿ ಅಣ್ವಸ್ತ್ರ ನೌಕೆಗಳ ನಿಯೋಜನೆ

“ವೆನೆಜುವೆಲಾ ತೈಲ ಟ್ಯಾಂಕರ್ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡ ಅಮೆರಿಕಕ್ಕೆ ರಷ್ಯಾ ಹೊಸ ಸವಾಲೆಸೆದಿದ್ದು, ತೈಲ...