ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚೆಮಾಡಿದ ಸಿಎಮ್ ಸಿದ್ದರಾಮಯ್ಯ

73

“ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದರು.

ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ನಾನು ರಕ್ಷಣಾ ಸಚಿವರನ್ನು ಭೇಟಿಯಾಗಿ ಮೂರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ಅಂತ್ಯದಲ್ಲಿ ನಡೆಯುವ ಮೈಸೂರು ದಸರಾ ಉತ್ಸವದಲ್ಲಿ ಪ್ರಮುಖ ಕಾರ್ಯಕ್ರಮವಾಗಿರುವ ಏರ್ ಶೋ ನಡೆಸುವ ಬಗ್ಗೆ ಚರ್ಚಿಸಿದೆ. “

ನಾವು ಪ್ರತಿ ವರ್ಷ ದಸರಾ ಹಬ್ಬದ ಸಮಯದಲ್ಲಿ ಏರ್ ಶೋ ಆಯೋಜಿಸುತ್ತೇವೆ. ಈ ವರ್ಷವೂ ಅದನ್ನು ಆಯೋಜಿಸುವಂತೆ ಕೇಂದ್ರವನ್ನು ವಿನಂತಿಸಿದ್ದೇವೆ” ಎಂದು ಸಿಎಂ ತಿಳಿಸಿದರು.

ತಮಿಳುನಾಡು ಮತ್ತು ಉತ್ತರ ಪ್ರದೇಶದಂತೆಯೇ ಕರ್ನಾಟಕಕ್ಕೂ ರಕ್ಷಣಾ ಕಾರಿಡಾರ್ ನೀಡುವಂತೆ ಕೋರಿದ್ದೇವೆ.

ರಾಜ್ಯದಲ್ಲಿ ಸುರಂಗ ಯೋಜನೆ, ವಿಮಾನ ನಿಲ್ದಾಣ ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರಸ್ತೆ ಮತ್ತು ಫ್ಲೈಓವರ್ ಡಬಲ್ ಡೆಕ್ಕರ್ ರಸ್ತೆ ಸೇರಿದಂತೆ ಮೂರು ಪ್ರಮುಖ ಯೋಜನೆಗಳ ಅನುಷ್ಠಾನಕ್ಕಾಗಿ ರಕ್ಷಣಾ ಇಲಾಖೆಯ ಭೂಮಿ ನೀಡುವಂತೆ ಕೇಳಿದ್ದೇವೆ ಎಂದರು. “ರಾಜನಾಥ್ ಸಿಂಗ್ ಅವರು ಏರ್ ಶೋಗೆ ಒಪ್ಪಿಕೊಂಡಿದ್ದಾರೆ

. ಆದರೆ ಇತರ ಪ್ರಸ್ತಾಪಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ” ಎಂದು ಸಿಎಂ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪಾಯಿಂಟ್ಮೆಂಟ್ ಸಿಕ್ಕರೆ ಭೇಟಿಯಾಗುವುದಾಗಿ ಸಿಎಂ ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹಾಜರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...