ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚೆಮಾಡಿದ ಸಿಎಮ್ ಸಿದ್ದರಾಮಯ್ಯ

42

“ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದರು.

ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ನಾನು ರಕ್ಷಣಾ ಸಚಿವರನ್ನು ಭೇಟಿಯಾಗಿ ಮೂರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ಅಂತ್ಯದಲ್ಲಿ ನಡೆಯುವ ಮೈಸೂರು ದಸರಾ ಉತ್ಸವದಲ್ಲಿ ಪ್ರಮುಖ ಕಾರ್ಯಕ್ರಮವಾಗಿರುವ ಏರ್ ಶೋ ನಡೆಸುವ ಬಗ್ಗೆ ಚರ್ಚಿಸಿದೆ. “

ನಾವು ಪ್ರತಿ ವರ್ಷ ದಸರಾ ಹಬ್ಬದ ಸಮಯದಲ್ಲಿ ಏರ್ ಶೋ ಆಯೋಜಿಸುತ್ತೇವೆ. ಈ ವರ್ಷವೂ ಅದನ್ನು ಆಯೋಜಿಸುವಂತೆ ಕೇಂದ್ರವನ್ನು ವಿನಂತಿಸಿದ್ದೇವೆ” ಎಂದು ಸಿಎಂ ತಿಳಿಸಿದರು.

ತಮಿಳುನಾಡು ಮತ್ತು ಉತ್ತರ ಪ್ರದೇಶದಂತೆಯೇ ಕರ್ನಾಟಕಕ್ಕೂ ರಕ್ಷಣಾ ಕಾರಿಡಾರ್ ನೀಡುವಂತೆ ಕೋರಿದ್ದೇವೆ.

ರಾಜ್ಯದಲ್ಲಿ ಸುರಂಗ ಯೋಜನೆ, ವಿಮಾನ ನಿಲ್ದಾಣ ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರಸ್ತೆ ಮತ್ತು ಫ್ಲೈಓವರ್ ಡಬಲ್ ಡೆಕ್ಕರ್ ರಸ್ತೆ ಸೇರಿದಂತೆ ಮೂರು ಪ್ರಮುಖ ಯೋಜನೆಗಳ ಅನುಷ್ಠಾನಕ್ಕಾಗಿ ರಕ್ಷಣಾ ಇಲಾಖೆಯ ಭೂಮಿ ನೀಡುವಂತೆ ಕೇಳಿದ್ದೇವೆ ಎಂದರು. “ರಾಜನಾಥ್ ಸಿಂಗ್ ಅವರು ಏರ್ ಶೋಗೆ ಒಪ್ಪಿಕೊಂಡಿದ್ದಾರೆ

. ಆದರೆ ಇತರ ಪ್ರಸ್ತಾಪಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ” ಎಂದು ಸಿಎಂ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪಾಯಿಂಟ್ಮೆಂಟ್ ಸಿಕ್ಕರೆ ಭೇಟಿಯಾಗುವುದಾಗಿ ಸಿಎಂ ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹಾಜರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...