ನವಜಾತ ಶಿಶು ಅಪಹರಣ ಯತ್ನ ಮಹಿಳೆ ವೇಷದಲ್ಲಿದ್ದ ವ್ಯಕ್ತಿ ಬಂಧನ ಉಳಿದವರು ಪರಾರಿ

42

“ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸುವ ಯತ್ನವನ್ನು ರೋಗಿಗಳ ಪರಿಚಾರಕರು ಮತ್ತು ಆಸ್ಪತ್ರೆಗೆ ಬಂದಿದ್ದ ಸಂದರ್ಶಕರು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮುಂಜಾನೆ ರೋಗಿಗಳ ಪರಿಚಾರಕರು ನಿದ್ರೆಗೆ ಜಾರಿದ ಸಂದರ್ಭದಲ್ಲಿ ರಾಯಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್)ಮಹಿಳೆಯರ ವೇಷದಲ್ಲಿ ಆಗಮಿಸಿದ ಗುಂಪೊಂದು ನಾಲ್ಕನೇ ಮಹಡಿಯಲ್ಲಿರುವ ಹೆರಿಗೆ ವಾರ್ಡ್ ಗೆ ತೆರಳಿದೆ.

ಅವರಲ್ಲಿ ಓರ್ವ ನವ ಜಾತ ಶಿಶುವನ್ನು ಅಪಹರಿಸಲು ಯತ್ನಿಸಿದ್ದಾರೆ. ಆದರೆ ಸ್ಥಳದಲ್ಲಿದ್ದ ಪರಿಚಾರಕರೊಬ್ಬರು ಅನುಮಾನಗೊಂಡು ಮಧ್ಯ ಪ್ರವೇಶಿಸಿದ್ದಾರೆ. ಈ ವೇಳೆ ಮಹಿಳೆಯ ವೇಷದಲ್ಲಿದ್ದ ವ್ಯಕ್ತಿಯ ಜೊತೆಗೆ ಕೆಲಹೊತ್ತು ವಾಗ್ವಾದ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತರ ಇಬ್ಬರು ಅಪಹರಣ ಯತ್ನದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವೇಳೆ ಗೃಹರಕ್ಷಕ ಸಿಬ್ಬಂದಿ ಕರ್ತವ್ಯದಲ್ಲಿ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಂತರ ಸಾರ್ವಜನಿಕರು ಬಂಧಿತ ಆರೋಪಿಯನ್ನು ಮಾರ್ಕೆಟ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...

ಅಲ್ಪಸಂಖ್ಯಾತರ ಸಾಲದ ಬಡ್ಡಿ ಮನ್ನಾ ತುಷ್ಟಿಕರಣದಲ್ಲಿ ತೊಡಗಿಕೊಂಡ ಸರಕಾರದ ವಿರುದ್ಧ:: ಸಿಟಿ ರವಿ ವಾಗ್ದಾಳಿ

“ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು, ಹಿಂದುಳಿದ...