ದಕ್ಷಿಣ ಭಾರತೀಯರು “ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಅವರಿಗೆ ಯಾವುದೇ ಗುತ್ತಿಗೆ ನೀಡಬಾರದು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದ

38

“ಹಳಸಿದ ಆಹಾರ ನೀಡಿದ್ದಾರೆ ಎಂದು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬುಲ್ದಾನಾ ವಿಧಾನಸಭಾ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಅವರು ಈಗ ದಕ್ಷಿಣ ಭಾರತೀಯರನ್ನು  ಗುರಿಯಾಗಿಸಿಕೊಂಡು ಹೊಸ ವಿವಾದ ಹುಟ್ಟುಹಾಕಿದ್ದಾರೆ. ದಕ್ಷಿಣ ಭಾರತೀಯರು “ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ”.

ಆದ್ದರಿಂದ ಅವರಿಗೆ ಮಹಾರಾಷ್ಟ್ರದಲ್ಲಿ ಆಹಾರ ಪೂರೈಕೆ ಗುತ್ತಿದೆ ನೀಡಬಾರದು ಎಂದು ಸಂಜಯ್ ಗಾಯಕ್ವಾಡ್ ಅವರು ಗುರುವಾರ ಹೇಳಿದ್ದಾರೆ. “

ಶೆಟ್ಟಿ ಎಂಬ ಗುತ್ತಿಗೆದಾರರಿಗೆ ಏಕೆ ಕಾಂಟ್ರ್ಯಾಕ್ಟ್ ನೀಡಲಾಯಿತು? ಅದನ್ನು ಮರಾಠಿ ವ್ಯಕ್ತಿಗೆ ನೀಡಿ. ನಾವು ಏನು ತಿನ್ನುತ್ತೇವೆ ಎಂದು ಅವರಿಗೆ ಗೊತ್ತಿದೆ ಮತ್ತು ನಮಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡುತ್ತಾರೆ.


ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಮತ್ತು ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ.

ಅವರು ನಮ್ಮ ಮಕ್ಕಳನ್ನು ಭ್ರಷ್ಟಗೊಳಿಸಿದ್ದಾರೆ. ಇಂತಹವರು ಉತ್ತಮ ಆಹಾರ ಹೇಗೆ ನೀಡುತ್ತಾರೆ?” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಶಾಸಕ ಪ್ರಶ್ನಿಸಿದ್ದಾರೆ

ಮಂಗಳವಾರ ಸಂಜೆ, “ಹಳಸಿದ” ದಾಲ್ ಮತ್ತು ಅನ್ನವನ್ನು ನೀಡಿದ್ದರಿಂದ ಕೋಪಗೊಂಡ ಸಂಜಯ್ ಗಾಯಕ್ವಾಡ್, ಕೊಲಾಬಾದ ಶಾಸಕರ ಹಾಸ್ಟೆಲ್‌ನ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವ ವಿಡಿಯೋ ಬುಧವಾರ ವೈರಲ್ ಆಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...

ಮುಂಬೈ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಾಗಿ ರಿತು ತಾವಡೆ ಆಯ್ಕೆ

“ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ...