ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ   ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ, ಪಮ್ಮೊಟ್ಟು ಆಯ್ಕೆ

65

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ ಪಮ್ಮೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭರತ್ ಶೆಟ್ಟಿ ಅವರು ಮುಂಬೈಯಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿದ್ದು ಅಜೆಕಾರು ಮತ್ತು ಪರಿಸರದಲ್ಲಿ ಸಾಮಾಜಿಕ ಕಳಕಳಿ ಬದ್ಧತೆ ಹೊಂದಿದ್ದವರಾಗಿದ್ದು ಸಾರ್ವಜನಿಕ ವಲಯದಲ್ಲಿ ಕೊಡುಗೈದಾನಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದವರಾಗಿದ್ದು

ಇವರ ಅವಿರೋಧ ಆಯ್ಕೆ ಪರಿಸರದ ಜನರಿಗೆ ಸಂತಸ ತಂದಿದೆ ಇವರ ಅಧ್ಯಕ್ಷತೆಯಲ್ಲಿ ದೇವಸ್ಥಾನದಲ್ಲಿ ಹಲವಾರು ಸೇವಾ ಕೈಂಕರ್ಯ ಗಳು ಗ್ರಾಮ ಸುಭಿಕ್ಷವಾಗಲಿ ಎನ್ನುವುದು ಸಾರ್ವಜನಿಕರ ಆಶಯ

ಉಪಾಧ್ಯಕ್ಷರಾಗಿ ಯಶೋಧಾ ಶೆಟ್ಟಿ ಬೊಂಡುಕುಮೇರಿ, ಕಾರ್ಯದರ್ಶಿಯಾಗಿ ಪ್ರಕಾಶ ಶೆಟ್ಟಿ ಮಜಲುಮನೆ, ಕೋಶಾಧಿಕಾರಿಯಾಗಿ ಪ್ರಿತೇಶ್‌ ಶೆಟ್ಟಿ ಕುಂಠಿನಿ,

ಸದಸ್ಯರಾಗಿ ಗಣೇಶ್ ನಾಯ್ಕ ಕಾಡುಹೊಳೆ, ವಿಶ್ವನಾಥ ಪೂಜಾರಿ, ವೀಣಾ ಮಡಿವಾಳ ಹಾಗೂ ಅರ್ಚಕರಾಗಿ ಕೃಷ್ಣಮೂರ್ತಿ ಭಟ್ ಆಯ್ಕೆಯಾಗಿದ್ದಾರೆ.

8 ಜನ ವ್ಯವಸ್ಥಾಪನ ಸಮಿತಿಯ ಸದಸ್ಯರಲ್ಲಿ ಇಬ್ಬರು ಗೈರಾಗಿದ್ದರು. ಗ್ರಾಮ ಆಡಳಿತಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಪ್ರಮೋದ್ ಸುವರ್ಣ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಗ್ರಾಮ ಸಹಾಯಕ ಉದಯ ನಾಯ್ಕ ಸಹಕರಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...