ಸೇತುವೆಗೆ ನಾನೇ ಶಿಲಾನ್ಯಾಸ ಮಾಡಿದ್ದೆ ನನ್ನ ಕೈಯಿಂದಲೇ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನೆ ಮಾಡಿಸುತ್ತಿದ್ದಾಳೆ  ಕೇಂದ್ರ ಸಚಿವ ನಿತಿನ್ ಗಡ್ಕರಿ

41

“ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ’ ಎಂದು ಹೆಸರಿಡಲಾಗಿದೆ.

ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಗಡ್ಕರಿ ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್ಎನ್ ಚನ್ನಬಸಪ್ಪ, ಡಿಎಸ್ ಅರುಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೇತುವೆಗೆ ಹಲವು ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಕೆಲವರು ಹೈಕೋರ್ಟ್‌ಗೂ ಹೋಗಿದ್ದರು.

ಆದರೆ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ನೂತನ ಐತಿಹಾಸಿಕ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ’ ಹೆಸರನ್ನು ಇಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಕಡತದಲ್ಲಿಅಂಬಾರಗೋಡ್ಲು- ಕಳಸವಳ್ಳಿ ಸೇತುವೆ ಎಂದು ಇದ್ದರೂ, ಈ ಭಾಗದ ಬಹುಜನರ ಅಪೇಕ್ಷೆ ಮತ್ತು ಸಿಗಂದೂರು ಚೌಡೇಶ್ವರಿ ದೇವಿ ಕೃಪಾಶೀರ್ವಾದ ಎಲ್ಲರ ಮೇಲೆ ಇರಬೇಕು ಎಂಬ ಕಾರಣಕ್ಕೆ ಐತಿಹಾಸಿಕ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ಇಡಬೇಕು ಎಂದು ತಿಳಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...