ಅಕ್ರಮ ಹಣ ವರ್ಗಾವಣೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್‌ ಬಂಧನ

36

“ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಇಡಿ ಅಧಿಕಾರಿಗಳು ಇಂದು ಬೆಳಗಿನ ಜಾವ ರಾಯ್ಪುರದ ಭಿಲಾಯಿ ಪಟ್ಟಣದಲ್ಲಿರುವ ಭೂಪೇಶ್ ಭಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಪ್ರಕರಣ ಸಂಬಂಧ ದಾಖಲೆಗಳು ಲಭ್ಯವಾದ ಬೆನ್ನಲ್ಲೇ ಜಾರಿ ನಿರ್ದೇಶಾನಲಯದ ಅಧಿಕಾರಿಗಳು, ಜಾರಿ ನಿರ್ದೇಶನಾಲಯ  ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ  ಅಡಿಯಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಪರಿಶೀಲನೆ ಬಳಿಕ ಇದೀಗ ಇಡಿ ಅಧಿಕಾರಿಗಳು ಚೈತನ್ಯ ಭಘೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಇಡಿ ದಾಳಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭೂಪೇಶ್ ಭಘೇಲ್ ಅವರು, ಇ.ಡಿ ಅಧಿಕಾರಿಗಳು ಆಗಮಿಸಿದ್ದಾರೆ.

ಇಂದು ವಿಧಾನಸಭೆ ಅಧಿವೇಶದ ಕಡೆಯ ದಿನವಾಗಿದೆ. ಅದಾನಿಗಾಗಿ ತಮ್ನಾರ್‌ನಲ್ಲಿ ಮರಗಳನ್ನು ಕಡಿಯುತ್ತಿರುವ ವಿಚಾರವನ್ನು ಇಂದು ಪ್ರಸ್ತಾಪಿಸಬೇಕಿತ್ತು. ಆದರೆ, ಭಿಲಾಯಿ ನಿವಾಸಕ್ಕೆ ‘ಸಾಹೇಬ್’ ಇ.ಡಿಯನ್ನು ಕಳುಹಿಸಿದ್ದಾರೆಂದು ಹೇಳಿದ್ದಾರೆ.

ಚೈತನ್ಯ ಬಘೇಲ್ ಅವರ ನಿವಾಸದ ಮೇಲೆ ಇ.ಡಿ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ಮಾರ್ಚ್ ತಿಂಗಳಿನಲ್ಲಿಯೂ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.

ಇ.ಡಿ ಆರೋಪದ ಪ್ರಕಾರ, ಛತ್ತೀಸ್ಗಢ ಮದ್ಯ ಹಗರಣದಿಂದ ರಾಜ್ಯ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಿದೆ. ಇದರಿಂದ, 2,100 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ಆದಾಯ ಗಳಿಸುವ ಮೂಲಕ ಮದ್ಯದ ಸಿಂಡಿಕೇಟ್ ಶ್ರೀಮಂತವಾಗಿದೆ.

ಮದ್ಯ ಹಗರಣದ ಆದಾಯವನ್ನು ಚೈತನ್ಯ ಬಘೇಲ್ ಪಡೆದಿರುವ ಶಂಕೆ ಇದೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯ ತಿಳಿಸಿತ್ತು.

2019 ಮತ್ತು 2022 ರ ನಡುವೆ ಛತ್ತೀಸ್‌ಗಢದಲ್ಲಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಕ್ರಮ ನಡೆದಿದ್ದು, ತನಿಖೆಯ ಭಾಗವಾಗಿ ವಿವಿಧ ಆರೋಪಿಗಳಿಂದ ಸುಮಾರು 205 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ.


Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...