ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

71

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಲ್ಲೂ ಅಸಮಾಧಾನವಿದೆ.

ಈ ಸಂಬಂಧ ಜುಲೈ 15 ರಂದು ಶಾಸಕರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮದಡಿ, 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರಲ್ಲಿ ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕೆಲಸ, ಗ್ರಾಮಾಂತರ ರಸ್ತೆ, ಸೇತುವೆ ಮತ್ತು ನಗರ ಪ್ರದೇಶದ ಕಾಮಗಾರಿಗೆ ರೂ. 37.50 ಕೋಟಿ ಮತ್ತು ಶಾಸಕರು ತಮ್ಮ ವಿವೇಚನೆಯಿಂದ ಆಯ್ಕೆ ಮಾಡಬಹುದಾದ ಇತರೆ ಇಲಾಖಾ ಕಾಮಗಾರಿಗಳಿಗೆ ರೂ. 12.50 ಕೋಟಿ ನೀಡಲಾಗುತ್ತಿದೆ.

ಶಾಸಕರು ತಮ್ಮ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಮುಖ್ಯಮಂತ್ರಿಗಳಿಗೆ ನೀಡುವಂತೆ ಸೂಚಿಸಲಾಗಿದೆ.

ಜುಲೈ 30 ಮತ್ತು 31 ರಂದು ಕೊಠಡಿ ಸಂಖ್ಯೆ-313, ಸಮಿತಿ ಕೊಠಡಿ, 3ನೇ ಮಹಡಿ, ವಿಧಾನಸೌಧದಲ್ಲಿ ಶಾಸಕರ ಜಿಲ್ಲಾವಾರು ಸಭೆ ಏರ್ಪಡಿಸಲಾಗಿದ್ದು, ಕಾಮಗಾರಿಗಳ ವಿವರಗಳೊಂದಿಗೆ ಶಾಸಕರು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಪತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತ್ರ ಹಣ ಹಂಚಿಕೆ ಎಂದು ಎಲ್ಲಿಯೂ ಸೂಚಿಸಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಾರತಮ್ಯದ ಆರೋಪ ಮಾಡಿವೆ. ಎಲ್ಲ ಶಾಸಕರಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ

. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್. ಅಶೋಕ, ಸಮತೋಲಿತ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ತಮ್ಮ ಕ್ಷೇತ್ರಗಳಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿಕೊಳ್ಳುತ್ತಿದ್ದಾರೆ.

ಈಗ ರೂ. 50 ಕೋಟಿ ಅನುದಾನ ನೀಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುವ ಬಗ್ಗೆ ಮಾಹಿತಿ ಇದೆ. ಆದರೆ ಇನ್ನೂ ಯಾವುದೇ ಗ್ಯಾರಂಟಿ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ರಾಜ್ಯಕ್ಕೆ ಸಿಎಂ ಆಗಿದ್ದಾರೋ ಅಥವಾ ಕಾಂಗ್ರೆಸ್ ಶಾಸಕರಿಗೆ ಮಾತ್ರ ಸಿಎಂ ಆಗಿರುವರೇ ಎಂದು ಜೆಡಿಎಸ್ ಪ್ರಶ್ನಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...