ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

44

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವರ ಬೆಂಗಾವಲು ಪೊಲೀಸ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರು ಗೇಟ್ ಬಳಿ ಬೆಂಗಾವಲು ಪೊಲೀಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಶ್ರೀರಂಗಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಡಿಕೆ ಶಿವಕುಮಾರ್ ಅವರಿದ್ದ ಕಾರು ಹಿಂದೆ ಬರುತ್ತಿದ್ದ ಕಾರಣ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಘಟನೆಯಲ್ಲಿ ಬೆಂಗಾವಲು ಪೊಲೀಸ್ ವಾಹನ ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...