180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

48

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲಂಧಿಸಿ ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ಅವರನ್ನೊಳಗೊಂಡ ವಿಶೇಷ ಪೀಠವು ಇಂದು ಬೆಳಿಗ್ಗೆ ತೀರ್ಪು ಪ್ರಕಟಿಸಿದೆ.


ಪೀಠವು ಎಲ್ಲ ಅಪರಾಧ ನಿರ್ಣಯಗಳನ್ನು ರದ್ದುಗೊಳಿಸಿದ್ದು, ಈ ಹಿಂದೆ ನೀಡಲಾದ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಗಳನ್ನು ಎತ್ತಿಹಿಡಿಯಲು ನಿರಾಕರಿಸಿದೆ. ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ.

ಆರೋಪಿಯೇ ಅಪರಾಧ ಮಾಡಿದ್ದಾನೆ ಎಂದು ನಂಬುವುದು ಕಷ್ಟ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ, ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸದಿದ್ದರೆ ತಕ್ಷಣ ಬಿಡುಗಡೆ ಮಾಡಬೇಕು ಎಂದೂ ಸೂಚನೆ ನೀಡಿದೆ.


2006ರ ಜುಲೈ 11ರಂದು ಮುಂಬೈಯ ಪಶ್ಚಿಮ ರೈಲುಗಳಲ್ಲಿ 15 ನಿಮಿಷಗಳ ಅಂತರದಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಟ್ಟು 180 ಮಂದಿ ಕೊನೆಯುಸಿರೆಳೆದಿದ್ದರು.

ಚರ್ಚ್‌ ಗೇಟ್‌ ಬೊರಿವಲಿ ರೈಲಿನಲ್ಲಿ 6.20ಕ್ಕೆ ಮೊದಲ ಸ್ಫೋಟ ಸಂಭವಿಸಿತ್ತು. ನಂತರ ಅದೇ ಸಮಯಕ್ಕೆ ಬಾಂದ್ರಾ- ಖಾರ್‌ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಸ್ಫೋಟವಾಗಿದ್ದು, ಇನ್ನುಳಿದಂತೆ ಜೋಗೇಶ್ವರಿ, ಮಾಹೀಂ, ಮೀರಾ ರೋಡ್-ಭಯಾಂದರ್‌, ಮಾಟುಂಗಾ-ಮಾಹೀಮ್‌ ಮತ್ತು ಬೊರಿವಲಿ ರೈಲುಗಳಲ್ಲಿ ಸ್ಫೋಟ ಸಂಭವಿಸಿತು.

ಪ್ರಕರಣದ ತನಿಖೆಯನ್ನು ಭಯೋತ್ಪಾದಕ ನಿಗ್ರಹ ದಳಕ್ಕೆ (ATS) ಹಸ್ತಾಂತರಿಸಿದ ಮೇಲೆ ಎಟಿಎಸ್‌ ಇಂಡಿಯನ್‌ ಮುಜಾಹಿದೀನ್‌ ಗೆ ಸೇರಿದ 13 ಜನರನ್ನು ಬಂಧಿಸಿತ್ತು.

ಕಮಲ್ ಅಹ್ಮದ್ ಅನ್ಸಾರಿ (37), ತನ್ವೀರ್ ಅಹ್ಮದ್ ಅನ್ಸಾರಿ (37), ಮೊಹಮ್ಮದ್ ಫೈಸಲ್ ಶೇಕ್ (36), ಇತೇಶಂ ಸಿದ್ದಿಕಿ (30), ಮೊಹಮ್ಮದ್ ಮಾಜಿದ್ ಶಫಿ (32), ಶೇಕ್ ಅಲಾಂ ಶೇಕ್ (41),

ಮೊಹಮ್ಮದ್ ಸಾಜಿದ್ ಅನ್ಸಾರಿ (34), ಮುಜಾಮಿಲ್ ಶೇಕ್ (27), ಸೋಹಿಲ್ ಮೊಹಮ್ಮದ್ ಶೇಕ್ (43), ಜಮೀರ್ ಅಹ್ಮದ್ ಶೇಕ್ (36), ನಾವೆದ್ ಹುಸೇನ್ ಖಾನ್ (30) ಮತ್ತು ಆಸಿಫ್ ಖಾನ್ (38) ಬಂಧಿತರಾಗಿದ್ದರು

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...