17ವರ್ಷ ಅರೋಗ್ಯ ಕೇಂದ್ರ ದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ವೈದ್ಯರಿಗೆ ನಾಡ ಸೇನಾಪುರ ಬಡಕೇರಿ ಹಡವು ಗ್ರಾಮಸ್ಥರಿಂದ ಪೌರಸನ್ಮಾನ

56

ನಾಡ ಸೇನಾಪುರ ಬಡಕೇರಿ ಹಡವು ಗ್ರಾಮಸ್ತರ ಪರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಇಲ್ಲಿ ಸತತ 17 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಖ್ಯಾತ ವೈದ್ಯರಾದ ಡಾಕ್ಟರ್ ಚಿಕ್ಮರಿ ಅವರನ್ನು ನಾಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಾಗರಿಕ ಸನ್ಮಾನ ದೊಂದಿಗೆ ಬೀಳ್ಕೊಡಲಾಯಿತು

ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಗುಡ್ಡ ಮಾಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ ವಹಿಸಿದರು ಮುಖ್ಯ ಅತಿಥಿಗಳಾಗಿ ರೇ ಫಾದರ್ ಝೆಡ್ ಎಮ್ ಡಿಸೋಜಾ ಕೈಗಾರಿಕಾ ತರಬೇತಿ ಕೇಂದ್ರನಾಡ ದ ಪ್ರಾಧ್ಯಾಪಕರಾದ kc ರಾಜೇಶ್ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಶೆಟ್ಟಿ ಬೆಳ್ಳಾಡಿ ಉಪಸ್ಥಿತರಿದ್ದರು

ಡಾಕ್ಟರ್ ಸುರೇಶ್ ಕುಮಾರ್ ಶೆಟ್ಟಿ ಶುಭ ಕೋರಿದರು ಇದೆ ಸಂದರ್ಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಸುಮಾರು ವರ್ಷ ಸೇವೆ ಸಲ್ಲಿಸಿ ಬೇರೆ ಆಸ್ಪತ್ರೆಗೆ ವರ್ಗಾವಣೆಗೊಂಡಿರುವ ಶ್ರೀಮತಿ ಜಯಲಕ್ಷ್ಮಿ ಹೆಬ್ಬಾರ್ ಹಾಗೂ ಶ್ರೀಮತಿ ಜ್ಯೋತಿ ಅವರನ್ನು ಸನ್ಮಾನಿಸಲಾಯಿತು ಹಾಲು ಉತ್ಪಾದಕ ಸಂಘದ ನಿರ್ದೇಶಕರಾದ ಕೆನಡಾ ಪಿರೇರಾ ಪ್ರಸ್ತಾವಿಕ ಮಾತುಗಳನ್ನಾಡಿದರು

ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಗ್ರಾಮಪಂಚಾಯಿತಿ ಸದಸ್ಯರಾದ ಸುಧಾಕರ್ ಶೆಟ್ಟಿ ಸಂಸಾಡಿ ಶ್ರೀಧರ್ ಬಡಕೇರಿ ಜ್ಯೋತಿ ಪೂಜಾರಿ ಉದ್ಯಮಿಗಳಾದ ಸತೀಶ್ ಎಂ ನಾಯಕ್ ಶರತ್ ಶೆಟ್ಟಿ ಬೆಳ್ಳಾಡಿ ಅಶೋಕ್ ಶೆಟ್ಟಿ ಸಂಸಾಡಿ ಕರುಣಾಕರ ಶೆಟ್ಟಿ ಸಂದೀಪ್ ಪೂಜಾರಿ

ಸೇನಾಪುರ ಗೋಪಾಲಕೃಷ್ಣ ನಾಡ ಸತೀಶ್ ರಾಮನಗರ ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯದರ್ಶಿಗಳಾದ ಸುರೇಶ್ ತೋಳರ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು ಮಾಜಿ ಕಾರ್ಯದರ್ಶಿ ವೆಂಕಟರಮಣ ಗಾಣಿಗ ವಂದಿಸಿದರು

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...