ಎರಡು ತಂಡಗಳ ಹೊಡೆದಾಟ 38ನೇ ಕಳ್ತೂರು ಸಂತೆಕಟ್ಟೆ  ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಆರೋಪಿಗಳ ಬಂಧನ

76

ಎರಡು ತಂಡಗಳ ಹೊಡೆದಾಟದೂರು ಪ್ರತಿ ದೂರು38ನೇ ಕಳ್ತೂರುಸಂತೆಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಕೊಲೆಯತ್ನ ಪ್ರಕರಣದಲ್ಲಿ ಕಳ್ತೂರು ಗ್ರಾಮದ ಸಂತೆಕಟ್ಟೆಯ ಶ್ರೀಕಾಂತ ಕುಲಾಲ್(29), ಕೆಂಜೂರಿನ ಸಂತೋಷ ನಾಯ್ಕ(43), ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ತೂರು ಸಂತೆಕಟ್ಟೆಯಲ್ಲಿರುವ ಸಿರಿ ಮುಡಿ ಹೊಟೇಲಿನಲ್ಲಿ ಜು.20ರಂದು ನಡೆದ ಎರಡೂ ಪತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ರೌಡಿ ಶೀಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿ ಶೀಟರ್‌ಗಳಾದ ಶ್ರೀಕಾಂತ್ ಕುಲಾಲ್ ಮತ್ತು ಸದಾನಂದ ಪೂಜಾರಿ ಎಂಬವರು ಸಂತೋಷ ನಾಯ್ಕ ಎಂಬವರೊಂದಿಗೆ ಸೇರಿಕೊಂಡು, ರೌಡಿ ರಾಜೇಶ ನಾಯ್ಕನಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ತೀವ್ರಗಾಯಗೊಂಡ ರಾಜೇಶ್ ನಾಯ್ಕ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೆ ಪ್ರತಿಯಾಗಿ ಸಂತೋಷ್ ನಾಯ್ಕ್ ನೀಡಿದ ದೂರಿನಲ್ಲಿ ರಾಜೇಶ್ ನಾಯ್ಕ ಜಾತಿನಿಂದನೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಶ್ರೀಕಾಂತ ಕುಲಾಲ್, ಸದಾನಂದ ಪೂಜಾರಿ, ರಾಜೇಶ್ ನಾಯ್ಕ ವಿರುದ್ಧ ಹೆಬ್ರಿ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಎಲ್ಲಾ ಆರೋಪಿ ಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...