ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಹೊಸ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

58

ವಿನಯ್ ಕುಮಾರ್ ಸೊರಕೆ ಯವರು ಕಳೆದ 2023ರ ವಿಧಾನ ಸಭಾ ಚುನಾವಣೆಯಲ್ಲಿ ಗ್ರಾಮ ಗ್ರಾಮಕ್ಕೆ ತೆರಳಿ ಇದು ನನ್ನ ಕೊನೆಯ ,

ಕಟ್ಟ ಕಡೆಯ ಚುನಾವಣೆ ಎಂದು ಜನರ ಮತ ಕೇಳಿದ್ದು ಇದರ ಹಿಂದಿನ ಚುನಾವಣೆಯಲ್ಲೂ ನನ್ನ ಕೊನೆ ಚುನಾವಣೆ ಎಂದು ಹೇಳಿದ್ದು ಈ ಬಾರಿ ಕಾರ್ಯಕರ್ತರ ಒತ್ತಾಯಕ್ಕೆ ಸರ್ವಾನೂಮತದಿಂದ ನಾನು ಸ್ಪರ್ಧಿಸಿದ್ದು

ಮುಂದಿನ 2028ರ ಚುನಾವಣೆಗೆ ನನಗೆ 74 ವರ್ಷ ನಡೆಯಲಿದ್ದು ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದಬೇಕಾಗುತ್ತೆ ಎಂದು ತಿಳಿಸಿರುವ ಹಳೆ ವಿಡಿಯೋ ಈಗ ಸಾಮಾಜಿಕ ಜಾಲತಾಣ ಹಾಗೂ ಕಾಂಗ್ರೆಸ್ ವಾಟ್ಸಪ್ ಗ್ರೂಪ್ ಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ವಾಟ್ಸಪ್ ಗ್ರೂಪಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಾಂಗ್ರೇಸ್ ಪಕ್ಷ ತಕ್ಷಣ ಘೋಷಿಸುವುದು ಅನಿವಾರ್ಯ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಹಾಗೂ ಮುಖಂಡರ ಅಭಿಮತವಾಗಿದೆ

ವಿನಯ್ ಕುಮಾರ್ ಸೊರಕೆ 2018ರ ಚುನಾವಣೆಯಲ್ಲಿ 11736 ಮತಗಳ ಹೀನಾಯ ಸೋಲು ಕಂಡಿದ್ದು 2023ರಲ್ಲಿ 13004 ಮತಗಳಲ್ಲಿ ಎರಡನೆಯ ಬಾರಿಗೆ ಹೀನಾಯವಾಗಿ ಸೋತಿದ್ದು

ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಲು ಕಾಪುವಿನಲ್ಲಿ ಅಭ್ಯರ್ಥಿ ಬದಲಾವಣೆಯಿಂದ ಕಾಂಗ್ರೆಸ್ ಗೆಲುವು ಕಟಿಟ್ಟ ಬುತ್ತಿ ಎನ್ನುವುದು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗ ವಾಗಿ ಚರ್ಚೆ ನೆಡೆಸುತ್ತಿರುವುದು ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ತುತ್ತು ಎನ್ನಲಾಗಿದೆ

ಮುಂದಿನ ದಿನಗಳಲ್ಲಿ ಅಭ್ಯರ್ಥಿ ಬದಲಾವಣೆ ಪ್ರಕ್ರಿಯೆ ಯಾವ ಹಂತಕ್ಕೆ ತಲುಪುತ್ತದೆ ಎಂದು ಕಾದು ನೋಡಬೇಕಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...