ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

46

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ದೇಶಾದ್ಯಂತ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಮುಖ ಆರೋಪಿಯೊಬ್ಬನನ್ನು ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಬಿಹಾರದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಆರೋಪಿ 11 ರಾಜ್ಯಗಳಲ್ಲಿ ಒಟ್ಟು ರೂ. 40.95 ಕೋಟಿಗೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬಯಲಾಗಿದೆ. ಪೂರ್ವ ಕರಾವಳಿಯ ವಿಲ್ಸನ್ ಫರ್ನಾಂಡಿಸ್‌ಗೆ ಡಿಹೆಚ್‌ಎಲ್ ಕೊರಿಯರ್ ಸರ್ವಿಸ್‌ನಿಂದ ಕರೆ ಮಾಡಿ, ಪಾರ್ಸೆಲ್‌ನಲ್ಲಿ ಮಾದಕವಸ್ತು ಇದೆ ಎಂದು ನಂಬಿಸಿ, ಮುಂಬೈ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಬೆದರಿಸಿ ರೂ. 3.80 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ನಡೆಸಲಾಗಿತ್ತು

. ಈ ಕುರಿತು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಬಿಹಾರಕ್ಕೆ ತೆರಳಿ, ಅಲ್ಲಿನ ಪಾಟ್ನಾ ನಿವಾಸಿ ಹರ್ದೀಪ್ ಸಿಂಗ್ (39) ಎಂಬಾತನನ್ನು ಜುಲೈ 12, 2025 ರಂದು ವಶಕ್ಕೆ ಪಡೆದು ಕಾರವಾರಕ್ಕೆ ಕರೆತಂದಿದ್ದಾರೆ.

ಬಂಧಿತ ಆರೋಪಿ ಹರ್ದೀಪ್ ಸಿಂಗ್ ಮೇಲೆ ದೇಶಾದ್ಯಂತ 29ಕ್ಕೂ ಹೆಚ್ಚು ಸೈಬರ್ ವಂಚನೆ ಮತ್ತು ಹೂಡಿಕೆ ವಂಚನೆ ಪ್ರಕರಣಗಳು ದಾಖಲಾಗಿದ್ದು, ತಮಿಳುನಾಡು, ಆಂಧ್ರಪ್ರದೇಶ, ಬೆಂಗಳೂರು ಸೇರಿ ಹಲವೆಡೆ ಕೋಟಿಗಟ್ಟಲೆ ಹಣ ವಂಚಿಸಿರುವುದು ದೃಢಪಟ್ಟಿದೆ.

ಆರೋಪಿಯು ವಿವಿಧ ಬ್ಯಾಂಕುಗಳಲ್ಲಿ 8 ಉಳಿತಾಯ ಖಾತೆ ಮತ್ತು 2 ಚಾಲ್ತಿ ಖಾತೆಗಳನ್ನು ಹೊಂದಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಸಿ.ಇ.ಎನ್ ಅಪರಾಧ ಪೊಲೀಸರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...